Advertisement
ಇರುವ ಕೃಷಿಭೂಮಿಯಲ್ಲೇ ಉಳುಮೆ ಮಾಡಲು ಹಿಂದೆ ಮುಂದೆ ನೋಡುತ್ತಿರುವ ಈ ಹೊತ್ತಿನಲ್ಲಿ ಬೆಳ್ತಂಗಡಿಯ ನಾರಾವಿ ಗ್ರಾಮದ ಸಂಜೀವ ದೇವಾಡಿಗ ಅವರು ಗುಡ್ಡವನ್ನು ಅಗೆದು ಗದ್ದೆ ಮಾಡಿ ವ್ಯವಸಾಯ ಮಾಡಿದ್ದಾರೆ. ಅಡಿಕೆ, ತೆಂಗು ತೋಟವಿದ್ದರೂ ತಾವು ಉಣ್ಣುವ ಅನ್ನವನ್ನು ತಾವೇ ಬೆಳೆಯಬೇಕು ಎಂಬ ಯೋಚನೆ ಅವರಿಗೆ ಬಂದಿದ್ದೇ ಇದಕ್ಕೆ ಕಾರಣ. 70ನೇ ವಯಸ್ಸಿನಲ್ಲಿ ಈ ಪರಿಯ ಉತ್ಸಾಹ ತೋರಿರುವುದು ಗಮನಾರ್ಹ. ಅರ್ಧ ಎಕ್ರೆಯಷ್ಟಿದ್ದ ತಮ್ಮದೇ ಗುಡ್ಡವನ್ನು ಅಗೆದು ಗದ್ದೆ ಮಾಡಿದ್ದಾರೆ. ಅದೇ ಹೊಲದಲ್ಲಿ 10 ಕ್ವಿಂಟಾಲ್ ಭತ್ತದ ಫಸಲನ್ನು ತೆಗೆದಿದ್ದಾರೆ.
Advertisement
ಗುಡ್ಡ ಅಗೆದು ಭತ್ತ ಬೆಳೆದ ಸ್ವಾವಲಂಬಿ ಕೃಷಿಕ
09:49 PM Jan 04, 2020 | Sriram |
Advertisement
Udayavani is now on Telegram. Click here to join our channel and stay updated with the latest news.