Advertisement

Session ನಿರೀಕ್ಷೆ ಹುಸಿಗೊಳಿಸಿದ ಅಧಿವೇಶನ: ಸಿಎಂಗೆ ಮಾಜಿ ಸಿಎಂ ಬೊಮ್ಮಾಯಿ ಪತ್ರ

09:05 PM Dec 18, 2023 | Team Udayavani |

ಬೆಂಗಳೂರು: ಬೆಳಗಾವಿಯಲ್ಲಿ ಪ್ರಥಮ ಅಧಿವೇಶನ ನಡೆಸಿದ ಹೊಸ ಸರ್ಕಾರದ ಮೇಲೆ ಉತ್ತರ ಕರ್ನಾಟಕದ ಜನ ನಿರೀಕ್ಷೆ ಇಟ್ಟಿದ್ದರು. ಆದರೆ, ಯಾವುದೇ ವಿಶೇಷ ಅಭಿವೃದ್ಧಿ ಪರ ನಿರ್ಣಯ ಘೋಷಿಸದೇ ಜನರ ನಿರೀಕ್ಷೆಯನ್ನು ಸರ್ಕಾರ ಹುಸಿಗೊಳಿಸಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಟೀಕಿಸಿದ್ದಾರೆ.

Advertisement

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮೂರು ಪುಟಗಳ ಪತ್ರ ಬರೆದಿರುವ ಅವರು, ಇಡೀ ಕರ್ನಾಟಕದಲ್ಲಿ ಯಾವುದೇ ಮೂಲ ಸೌಕರ್ಯಗಳ ಕಾಮಗಾರಿಗಳು ಪ್ರಾರಂಭವಾಗದಿರುವ ಕಟು ಸತ್ಯದ ಅನುಭವ ಜನರಿಗೆ ಆಗಿದೆ ಎಂದು ಹೇಳಿದ್ದಾರೆ.

ಕೃಷ್ಣಾ ಮೇಲ್ದಂಡೆ ಹಂತ 3 ರ 130 ಟಿಎಂಸಿ ನೀರು ಬಳಕೆ ಮಾಡಲು ನಮ್ಮ ಸರ್ಕಾರ ಪ್ರಾರಂಭ ಮಾಡಿರುವ ಪುನರ್ವಸತಿ ಮತ್ತು ಪುನರ್‌ನಿರ್ಮಾಣನಕ್ಕೆ ಈ ವರ್ಷ ಒಂದು ರೂ.ಅನ್ನೂ ಬಿಡುಗಡೆ ಮಾಡದಿರುವುದು ಉತ್ತರ ಕರ್ನಾಟಕದ ಬಗ್ಗೆ ತಮ್ಮ ಸರ್ಕಾರಕ್ಕೆ ಇರುವ ಅಸಡ್ಡೆ ಭಾವನೆ ಗೊತ್ತಾಗುತ್ತದೆ ಎಂದು ಟೀಕಿಸಿದ್ದಾರೆ.

ನಮ್ಮ ಅವಧಿಯಲ್ಲಿ ರಾಜ್ಯದಲ್ಲಿ ಹೊಸದಾಗಿ ಏಳು ವಿವಿಗಳ ಸ್ಥಾಪನೆ ಮಾಡಲಾಗಿದೆ. ಆದರೆ ಈಗಿನ ಸರ್ಕಾರ ಅನುದಾನದ ಕೊರತೆ ನೆಪ ಹೇಳಿ ವಿವಿಗಳನ್ನು ಮುಚ್ಚಲು ಮುಂದಾಗಿದೆ. ಈ ಪ್ರಸ್ತಾಪ ಕೈಬಿಡುವಂತೆ ಆಗ್ರಹಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next