Advertisement

ಸುರತ್ಕಲ್‌ನಲ್ಲಿ ಪವಿತ್ರಾ ಗೌಡ ಹೋಲುವ ಕೇಸ್: ಯುವತಿಗೆ ಅಶ್ಲೀಲ ಫೋಟೋ- ಸಂದೇಶ ಕಳಿಸಿ ಕಿರುಕುಳ

12:11 PM Oct 01, 2024 | Team Udayavani |

ಸುರತ್ಕಲ್:‌ ಚಿತ್ರನಟಿ ಪವಿತ್ರ ಗೌಡ ಅವರ ಕೇಸಿಗೆ ಹೋಲುವ ಪ್ರಕರಣವೊಂದು ಸುರತ್ಕಲ್ ಸಮೀಪದ ಕೃಷ್ಣಾಪುರದಲ್ಲಿ ನಡೆದಿರುವುದು ವರದಿಯಾಗಿದೆ.

Advertisement

ಮಂಗಳೂರಿನಲ್ಲಿ ಶಿಕ್ಷ,ಣ ಪಡೆಯುತ್ತಿರುವ ಯುವತಿಗೆ ಯುವಕನೊಬ್ಬ ಅಶ್ಲೀಲ ಸಂದೇಶ ಹಾಗೂ ಫೋಟೋಗಳನ್ನು ಕಳುಹಿಸಿ ಕಿರುಕುಳ ನೀಡಿರುವ ಪ್ರಕರಣ ಬೆಳಕಿಗೆ ಬಂದಿದೆ.

ಏನಿದು ಘಟನೆ?:  19 ವರ್ಷ ಯುವತಿ ಈ ಹಿಂದೆ ಸುರತ್ಕಲ್ ನಲ್ಲಿ ಕಲಿಯುತ್ತಿರುವಾಗ ಮಂಜನಾಡಿ ಬಳಿಯ ಮೊಹಮ್ಮದ್ ಶಾಕಿಬ್ ಎಂಬಾತ ಚೊಕ್ಕಬೆಟ್ಟಿನ ಸ್ನೇಹಿತೆಯ ಬಳಿಯಿಂದ ನಂಬರ್‌ ಪಡೆದುಕೊಂಡು ಯುವತಿಗೆ ಪ್ರತಿದಿನ ಮೆಸೇಜ್‌ ಮಾಡುತ್ತಿದ್ದ. ಯುವತಿಯ ಹಿಂದೆ ಬಿದ್ದಿದ್ದ ಶಾಕಿಬ್‌ ಆಕೆಗೆ ವಾಟ್ಸಾಪ್‌ನಲ್ಲಿ ಪ್ರತಿದಿನ ಅಶ್ಲೀಲ ಸಂದೇಶ ಹಾಗೂ ಫೋಟೋಗಳನ್ನು ಕಳುಹಿಸುತ್ತಿದ್ದ. ಯುವತಿಗೆ ಮರ್ಮಾಂಗದ ಚಿತ್ರವನ್ನು ಕಳುಹಿಸಿ ಕಿರುಕುಳ ನೀಡುತ್ತಿದ್ದ ಎಂದು ದೂರಿನಲ್ಲಿ ಹೇಳಲಾಗಿದೆ.

ಇದರಿಂದಾಗಿ ಮಾನಸಿಕವಾಗಿ ನೊಂದ ಯುವತಿ ಅನಾರೋಗ್ಯಕ್ಕೆ ತುತ್ತಾಗಿದ್ದಾಳೆ. ಆಕೆ ಕಡಿಮೆ ರಕ್ತದೊತ್ತಡದ ಸಮಸ್ಯೆಗೂ ಒಳಗಾಗಿ ಕಾಲೇಜಿಗೂ ಹೋಗಲಾಗದೆ ಮನೆಯಲ್ಲಿಯೇ ಉಳಿಯುವಂತ ಸ್ಥಿತಿಗೆ ಬಂದಿದ್ದಾಳೆ.

ಈ ವಿಚಾರವನ್ನು ಯುವತಿ ಪೋಷಕರಿಗೆ ತಿಳಿಸಿದ್ದು, ಬಳಿಕ ಯುವಕನ ವಿರುದ್ಧ ದೂರು ದಾಖಲಿಸಿದ್ದಾರೆ, ದೂರು ಸ್ವೀಕರಿಸಿದ ಪೊಲೀಸರು ಬೆಂಗಳೂರಿನಲ್ಲಿ ಕೆಲಸಕ್ಕಿದ್ದ ಶಾಕಿಬ್ ನನ್ನು ವಶಕ್ಕೆ ಪಡೆದು ಠಾಣೆಗೆ ಕರೆತಂದು ವಿಚಾರಣೆ ನಡೆಸಿದ್ದಾರೆ.

Advertisement

ಯುವತಿ ಕಡೆಯವರು ಒಟ್ಟಾಗಿ ಠಾಣೆಯಲ್ಲಿ ಸೇರಿ ಯುವಕನ ವಿರುದ್ದ ಕಾನೂನು ಕ್ರಮಕ್ಕೆ ಒತ್ತಾಯಿಸಿದ್ದಾರೆ.

ಹೋಟೆಲ್ ಒಂದರಲ್ಲಿ ರಿಸೆಪ್ಷನ್‌ ವಿಭಾಗದಲ್ಲಿ ಕೆಲಸಕ್ಕೆ ಸೇರಿರುವ ಈ ಯುವಕ ಹೋಟೆಲ್ ಗೆ ಬರುವ ಗ್ರಾಹಕರ ವಿರುದ್ದವೂ ಇಂತಹ ದುಷ್ಕೃತ್ಯ ಮಾಡಿದ್ದಾನೆಯೇ ಎಂಬುದರ ಬಗ್ಗೆಯೂ ತನಿಖೆ ನಡೆಯಬೇಕಿದೆ ಎಂದು ಪೊಲೀಸರು ಹೇಳಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next