Advertisement

ಬೀದರ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ

01:10 PM Oct 13, 2021 | Team Udayavani |

ಬೀದರ: ಜಿಲ್ಲೆಯ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದು ಕೇಂದ್ರ ನವೀಕರಿಸಬಹುದಾದ ಇಂಧನ ಮೂಲ, ರಾಸಾಯನಿಕ ಹಾಗೂ ರಸಗೊಬ್ಬರ ಖಾತೆ ರಾಜ್ಯ ಸಚಿವ ಭಗವಂತ ಖೂಬಾ ಹೇಳಿದರು.

Advertisement

ರೋಟರಿ ಕ್ಲಬ್‌ ಆಫ್‌ ಬೀದರ, ರೋಟರಿ ಕ್ಲಬ್‌ ಆಫ್‌ ಬೀದರ್‌ ನ್ಯೂ ಸೆಂಚುರಿ ಹಾಗೂ ರೋಟರಿ ಕ್ಲಬ್‌ ಆಫ್‌ ಬೀದರ್‌ ಫೋರ್ಟ್‌ ವತಿಯಿಂದ ನಗರದ ಘಾಳೆ ಕನ್ವೆನ್ಶನ್‌ ಹಾಲ್‌ನಲ್ಲಿ ಆಯೋಜಿಸಿದ್ದ ಸಂವಾದ ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿ, ತಮ್ಮ ಸಚಿವಾಲಯ ಅಧೀನದ ಅಭಿವೃದ್ಧಿಗೆ ಸಂಬಂಧಿಸಿದ ಎಲ್ಲ ಕೆಲಸ, ಕಾರ್ಯಗಳನ್ನು ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ತಮ್ಮ ಅಧಿಕಾರ ಅವಧಿಯಲ್ಲಿ ಬೀದರನಿಂದ ನಾಗರಿಕ ವಿಮಾನಯಾನ ಸೇವೆ, ಹೊಸ ರೈಲುಗಳು, ಹೊಸ ಹೆದ್ದಾರಿಗಳು, ಪಾಸ್‌ಪೋರ್ಟ್‌ ಸೇವಾ ಕೇಂದ್ರ ಸ್ಥಾಪನೆ ಸೇರಿದಂತೆ ಹಲವು ಕಾರ್ಯಗಳನ್ನು ಕೈಗೊಳ್ಳಲಾಗಿದೆ. ಕೇಂದ್ರದ ಯೋಜನೆಗಳ ಸಮರ್ಪಕ ಅನುಷ್ಠಾನಕ್ಕೂ ಒತ್ತು ಕೊಡಲಾಗಿದೆ ಎಂದುಹೇಳಿದರು.

ಬೀದರ-ದೆಹಲಿ ವಾಯಾ ಕಲಬುರ್ಗಿ ಹೊಸ ರೈಲು ಆರಂಭಿಸಬೇಕು. ಈ ಭಾಗದಲ್ಲಿ ಕೈಗಾರಿಕೆ ಅಭಿವೃದ್ಧಿಗೆ ಪ್ರಾಶಸ್ತ್ಯ ನೀಡಬೇಕು ಎಂಬಿತ್ಯಾದಿ ಸಲಹೆಗಳಿಗೆ ಸ್ಪಂದಿಸಿದ ಅವರು, ಈ ದಿಸೆಯಲ್ಲಿ ಎಲ್ಲ ಪ್ರಯತ್ನ ನಡೆಸಲಾಗುವುದು ಎಂದು ತಿಳಿಸಿದರು.

ರಾಜ್ಯ ಹಜ್‌ ಸಮಿತಿ ಅಧ್ಯಕ್ಷ ರೌಫೊದ್ದಿನ್‌ ಕಚೇರಿವಾಲೆ, ಅಂತಾರಾಷ್ಟ್ರೀಯ ರೋಟರಿ ಜಿಲ್ಲೆ 3160 ಸೆವೆನ್‌ ಏರಿಯಾಸ್‌ ಫೋಕಸ್ ಅಧ್ಯಕ್ಷ ಬಸವರಾಜ ಧನ್ನೂರ, ಜಿಲ್ಲಾ ಕಾರ್ಯದರ್ಶಿ ಶಿವಶಂಕರ ಕಾಮಶೆಟ್ಟಿ, ರೋಟರಿ ಕಲ್ಯಾಣ ಝೋನ್‌ ಸಹಾಯಕ ಗವರ್ನರ್‌ ಶಿವಕುಮಾರ ಯಲಾಲ್‌, ಡಾ| ನಿತೇಶಕುಮಾರ ಬಿರಾದಾರ, ಸುಷ್ಮಾ ಪಾಟೀಲ, ಸುನೈನಾ ಗುತ್ತಿ ಇದ್ದರು. ಸುರೇಶ ಚನಶೆಟ್ಟಿ ನಿರೂಪಿಸಿದರು. ಪ್ರಕಾಶ ಟೊಣ್ಣೆ ಸ್ವಾಗತಿಸಿದರು. ಪ್ರೊ| ಎಸ್‌.ಬಿ. ಚಿಟ್ಟಾ ವಂದಿಸಿದರು.

Advertisement

 

Advertisement

Udayavani is now on Telegram. Click here to join our channel and stay updated with the latest news.

Next