Advertisement

ಮಳೆಗಾಗಿ ಋಷ್ಯ ಶೃಂಗೇಶ್ವರ ದೇಗುಲದಲ್ಲಿ ಸರ್ಕಾರದ ವಿಶೇಷ ಪೂಜೆ

09:41 AM Jun 06, 2019 | Vishnu Das |

ಚಿಕ್ಕಮಗಳೂರು: ರಾಜ್ಯದಲ್ಲಿ ಮಳೆಗಾಗಿ ಪ್ರಾರ್ಥಿಸಿ ದೇವಾಲಯಗಳಲ್ಲಿ ಪೂಜೆ , ಹೋಮಗಳು ಮುಂದುವರಿದಿದೆ. ಸರ್ಕಾರದ ವತಿಯಿಂದ ಋಷ್ಯಶೃಂಗ ದೇಗುಲದಲ್ಲಿ ನಾಳೆ ಗುರುವಾರ ವಿಶೇಷ ಪೂಜೆ ನಡೆಸಲಾಗುತ್ತಿದೆ.

Advertisement

ಸಚಿವ ಡಿ.ಕೆ.ಶಿವಕುಮಾರ್‌ ಮತ್ತು ಪಿ.ಟಿ.ಪರಮೇಶ್ವರ್‌ ನಾಯ್ಕ್‌ ಅವರು ಪೂಜೆ ಸಲ್ಲಿಸಿ ಮಳೆಗಾಗಿ ಪ್ರಾರ್ಥಿಸಲಿದ್ದಾರೆ.

ಸಚಿವ ಡಿ.ಕೆ.ಶಿವಕುಮಾರ್‌ ಅವರು ಈ ಹಿಂದೆಯೂ ದೇಗುಲಕ್ಕೆ ಆಗಮಿಸಿ ಮಳೆಗಾಗಿ ಪ್ರಾರ್ಥಿಸಿದ್ದರು.

ಪುರಾಣದಲ್ಲಿ ಕಶ್ಯಪ ಬ್ರಹ್ಮನ ಮೊಮ್ಮಗನಾದ ಮಹರ್ಷಿ ಋಷ್ಯಶೃಂಗರು ಮೋಡಗಳನ್ನು ಆಕರ್ಷಿಸಿ ಮಳೆ ತರಿಸುವ ವಿಶಿಷ್ಟ ಶಕ್ತಿಯಿದ್ದ ಕಾರಣಕ್ಕೆ ಈ ಕ್ಷೇತ್ರ ಹೆಸರಾಗಿದೆ. ಸಕಾಲಕ್ಕೆ ಮಳೆ ಬೆಳೆ ಆಗುವಂತೆ ಪ್ರಾರ್ಥಿಸಿ ಭಕ್ತರು ಕ್ಷೇತ್ರಕ್ಕೆ ಬಂದು ಪೂಜಾಕೈಂಕರ್ಯಗಳನ್ನು ನೆರವೇರಿಸುವುದು ಹಿಂದಿನಿಂದಲೂ ನಡೆದು ಬಂದಿದೆ.

Advertisement

Udayavani is now on Telegram. Click here to join our channel and stay updated with the latest news.

Next