Advertisement

ತುಮಕೂರು: ಕ್ರೀಡಾಕೂಟದಲ್ಲಿ ಗೆದ್ದು ಬಹುಮಾನ ಪಡೆಯುವ ಮುನ್ನವೇ ವಿದ್ಯಾರ್ಥಿ ಮೃತ್ಯು

10:10 PM Aug 03, 2023 | Team Udayavani |

ತುಮಕೂರು : ಸರ್ಕಾರಿ ಶಾಲೆಯ ವಿದ್ಯಾರ್ಥಿ ಒಬ್ಬ ಹೋಬಳಿ ಮಟ್ಟದಲ್ಲಿ ನಡೆಯುತ್ತಿದ್ದ ಕ್ರೀಡಾ ಕೂಟ ದಲ್ಲಿ ಭಾಗವಹಿಸಿ ಬಹುಮಾನ ಗೆದ್ದು ಬಹುಮಾನ ಸ್ವೀಕರಿಸುವ ಮುಂಚೆಯೇ ಹೃದಯ ಘಾತದಿಂದ ನಿಧನರಾಗಿರುವ ಹೃದಯವಿದ್ರಾವಕ ಘಟನೆ ತುಮಕೂರು ತಾಲೂಕಿನ ಚಿಕ್ಕತೊಟ್ಲು ಕೆರೆ ಗ್ರಾಮ ದಲ್ಲಿ ಗುರುವಾರ ಸಂಜೆ ನಡೆದಿದೆ.

Advertisement

ಕಲಬುರಗಿ ಮೂಲದ ವಿದ್ಯಾರ್ಥಿ ಭೀಮ ಶಂಕರ್ ಕಳೆದ ಎರಡು ದಿನಗಳಿಂದ ನಡೆಯುತ್ತಿರುವ ಹೋಬಳಿ ಮಟ್ಟದ ಕ್ರೀಡಾ ಕೂಟದಲ್ಲಿ ಭಾಗವಹಿಸಿದ್ದು ಸದರಿ ವಿದ್ಯಾರ್ಥಿ ತುಮಕೂರು ತಾಲೂಕಿನ ಬೆಳೆದರ ಗ್ರಾಮದ ಗ್ರಾಮಂತರ ಪ್ರೌಢಶಾಲೆಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದು ಗುರುವಾರ ನಡೆದ ಹೋಬಳಿ ಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸಿ ದ್ವಿತೀಯ ಬಹುಮಾನವನ್ನು ರಿಲೇ ಆಟದಲ್ಲಿ ಪಡೆದಿದ್ದು ಬಹುಮಾನ ಸ್ವೀಕರಿಸುವ ಮುಂಚೆಯೇ ಸಾವನ್ನಪ್ಪಿರುವ ಘಟನೆ ನಡೆದಿದೆ.

ತುಮಕೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದ್ದು ವಿದ್ಯಾರ್ಥಿಯ ಮೃತ ದೇಹವನ್ನು ತುಮಕೂರಿನ ಶ್ರೀದೇವಿ ಮೆಡಿಕಲ್ ಕಾಲೇಜಿನಲ್ಲಿ ಇರಿಸಲಾಗಿದೆ.

ಇನ್ನು ಅಮೃತ ವಿದ್ಯಾರ್ಥಿ ಕಲಬುರಗಿ ಮೂಲದವನಾಗಿದ್ದು ವಿದ್ಯಾರ್ಥಿಯ ತಂದೆ-ತಾಯಿ ಇಟ್ಟಿಗೆ ಕಾರ್ಖಾನೆಯಲ್ಲಿ ಕೆಲಸ ನಿರ್ವಹಿಸುತ್ತಿದ್ದು ಮಗನ ಸಾವಿನಿಂದ ಪೋಷಕರು ಕಂಗಾಲಾಗಿದ್ದು ಎಲ್ಲರ ಮನವು ಕಲಕುವಂತಿದೆ.ತುಮಕೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದ್ದು ಪೊಲೀಸರು ತನಿಖೆ ಕೈಗೊಂಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next