Advertisement

Karkala ದೇವಸ್ಥಾನಕ್ಕೆ ಹೋಗುತ್ತಿದ್ದ ವಿದ್ಯಾರ್ಥಿನಿಗೆ ಬೈಕ್‌ ಢಿಕ್ಕಿ;ಸಾವು

12:32 AM Jun 24, 2024 | Team Udayavani |

ಕಾರ್ಕಳ: ದೇವಸ್ಥಾನಕ್ಕೆ ಹೋಗುತ್ತಿದ್ದ ವೇಳೆ ಬೈಕ್‌ ಢಿಕ್ಕಿ ಹೊಡೆದು ವಿದ್ಯಾರ್ಥಿನಿ ಪ್ರಾಣಮ್ಯ ಶೆಟ್ಟಿ (14) ಮೃತಪಟ್ಟ ಘಟನೆ ನಂದಳಿಕೆಯಲ್ಲಿ ಸಂಭವಿಸಿದೆ.

Advertisement

ಹತ್ತನೇ ತರಗತಿ ಕಲಿಯುತ್ತಿರುವ ವಿದ್ಯಾರ್ಥಿನಿ ಶನಿವಾರ ಸಂಜೆ ಸ್ಥಳೀಯ ಲಕ್ಷ್ಮೀ ಜನಾರ್ದನ ದೇವಸ್ಥಾನಕ್ಕೆ ಎಂದು ಮನೆಯಿಂದ ಹೊರಟ ಸ್ವಲ್ಪ ಸಮಯದಲ್ಲಿಯೇ ಬೈಕ್‌ ಢಿಕ್ಕಿಯಾಗಿತ್ತು. ಬೈಕ್‌ ಸವಾರ ರಸ್ತೆಯಿಂದ ತೀರಾ ಎಡಬದಿಗೆ ಬಂದು ಪ್ರಣಮ್ಯ ಅವರಿಗೆ ಹಿಂದಿನಿಂದ ಢಿಕ್ಕಿ ಹೊಡೆದಿದ್ದ.

ತಲೆಗೆ ಏಟಾದ ಆಕೆಯನ್ನು ಕೂಡಲೇ ಕಾರ್ಕಳದ ಆಸ್ಪತ್ರೆಗೆ ಸಾಗಿಸಲಾಯಿತಾದರೂ ಉಳಿಸಿಕೊಳ್ಳಲು ಸಾಧ್ಯವಾಗಲಿಲ್ಲ. ಬೈಕ್‌ ಸವಾರನ ಅಜಾಗರೂಕತೆಯ ಚಾಲನೆಯ ಪರಿಣಾಮ ಈ ಘಟನೆ ನಡೆದಿದೆ ಎಂದು ದೂರು ದಾಖಲಾಗಿದೆ.

ಎಳವೆಯಲ್ಲಿ ತಂದೆಯನ್ನು ಕಳೆದುಕೊಂಡಿದ್ದರು. ಬಳಿಕ ತಾಯಿ ಗೇರು ಬೀಜ ಸಂಸ್ಥೆಯಲ್ಲಿ ಕೂಲಿ ಕಾರ್ಮಿಕೆಯಾಗಿರುವ ನಳಿನಿ ಶೆಟ್ಟಿ ಕಷ್ಟದಿಂದ ಇಬ್ಬರು ಹೆಣ್ಣು ಮಕ್ಕಳನ್ನು ಬೆಳೆಸಿದ್ದರು. ಇವರ ಎರಡು ಮಂದಿ ಪುತ್ರಿಯರಲ್ಲಿ ಮೃತರು ಕಿರಿಯವರು. ಬೆಳ್ಮಣ್‌ ಮುಲ್ಲಡ್ಕ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಹತ್ತನೆ ತರಗತಿ ಓದುತ್ತಿದ್ದರು. ಹಿರಿಯ ಸಹೋದರಿ ನಿಟ್ಟೆಯಲ್ಲಿ ವ್ಯಾಸಾಂಗ ಮಾಡುತ್ತಿದ್ದಾರೆ. ಸಾಮಾನ್ಯವಾಗಿ ಇವರು ದೇವಸ್ಥಾನಕ್ಕೆ ಸಂಜೆ ವೇಳೆ ಹೋಗಿ ಬರುವುದನ್ನು ರೂಢಿಸಿಕೊಂಡಿದ್ದರು. ಕಲಿಕೆಯಲ್ಲಿ ಪ್ರತಿಭಾನ್ವಿತೆಯಾಗಿದ್ದಳು. ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

Advertisement
Advertisement

Udayavani is now on Telegram. Click here to join our channel and stay updated with the latest news.

Next