Advertisement

ತಾಯಿ ಮೃತಪಟ್ಟರೂ ಎಸೆಸೆಲ್ಸಿ ಮೌಲ್ಯಮಾಪನ ನಡೆಸಿದ ಶಿಕ್ಷಕಿ

10:50 AM Jul 14, 2020 | mahesh |

ಮಡಿಕೇರಿ: ತಾಯಿ ಮೃತಪಟ್ಟಿದ್ದರೂ ಸಹ ಮಕ್ಕಳ ಭವಿಷ್ಯದ ದೃಷ್ಟಿಯಿಂದ ಎಸೆಸೆಲ್ಸಿ ಪರೀಕ್ಷೆಯ ಮೌಲ್ಯಮಾಪನಕ್ಕೆ ಹಾಜರಾಗುವ ಮೂಲಕ ಶಿಕ್ಷಕಿಯೊಬ್ಬರು ಕರ್ತವ್ಯನಿಷ್ಠೆ ಮೆರೆದಿದ್ದಾರೆ.

Advertisement

ಮಡಿಕೇರಿ ತಾಲೂಕಿನ ಬೆಟ್ಟಿಗೇರಿಯ ಉದಯ ಪ್ರೌಢ ಶಾಲೆಯ ಶಿಕ್ಷಕಿ ಕವಿತಾ ಅವರ ತಾಯಿ ವಯೋ ಸಹಜ ಕಾಯಿಲೆಯಿಂದ ಸೋಮವಾರ ಮುಂಜಾನೆ ನಿಧನ ಹೊಂದಿದರು. ಎಸೆಸೆಲ್ಸಿ ಪರೀಕ್ಷೆ ತುಂಬಾ ವಿಳಂಬವಾಗಿರುವುದರಿಂದ ವಿದ್ಯಾರ್ಥಿಗಳ ಭವಿಷ್ಯದ ದೃಷ್ಟಿಯಿಂದ ತಾನು ಗೈರುಹಾಜರಾಗುವುದು ಸರಿಯಲ್ಲ ಎಂದು ಭಾವಿಸಿದ ಅವರು ಮಡಿಕೇರಿಯ ಸಂತ ಮೈಕಲರ ಶಾಲೆಯಲ್ಲಿ ನಡೆಯುತ್ತಿರುವ ಮೌಲ್ಯಮಾಪನಕ್ಕೆ ಹಾಜರಾದರು. ಕರ್ತವ್ಯ ಮುಗಿದ ಬಳಿಕ ತಾಯಿಯ ಅಂತ್ಯಸಂಸ್ಕಾರ ನಡೆಸಿದರು.

ಶಿಕ್ಷಣಾಧಿಕಾರಿ ಮಚ್ಚಾಡೋ ಅವರು ಶಿಕ್ಷಕಿಯ ಕರ್ತವ್ಯ ನಿಷ್ಠೆಯನ್ನು ಶ್ಲಾಘಿಸಿದ್ದಾರೆ. ಸಹೋದ್ಯೋಗಿಗಳು ಕೂಡ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next