Advertisement

ಬಸ್ ದ್ವಿಚಕ್ರ ವಾಹನ ನಡುವೆ ಭೀಕರ ಅಪಘಾತ: ಇಬ್ಬರು ಸ್ಥಳದಲ್ಲೇ ಮೃತ್ಯು, ಓರ್ವನಿಗೆ ಗಾಯ

09:31 PM Oct 23, 2024 | Team Udayavani |

ತಾವರಗೇರಾ: ಸಮೀಪದ ಗರ್ಜಿನಾಳ ಕ್ರಾಸ್ ಬಳಿ ದ್ವಿಚಕ್ರ ವಾಹನಕ್ಕೆ ಕೆಎಸ್ಆರ್ ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲಿ ಇಬ್ಬರು ಮೃತಪಟ್ಟು ಇನ್ನೋರ್ವ ಗಾಯಗೊಂಡಿರುವ ಘಟನೆ ಬುಧವಾರ(ಅ.23) ನಡೆದಿದೆ.

Advertisement

ಮೃತರನ್ನು ಗರ್ಜಿನಾಳಗ್ರಾಮದ ಹನುಮನ ಗೌಡ ಸೋಮನಗೌಡ ಗೌರಿಪುರ (30). ಹಾಗೂ ಬಸವರಾಜ್ ರಾಮಣ್ಣ ಅಂತರಗಂಗಿ. (20). ಎಂದು ಗುರುತಿಸಲಾಗಿದ್ದು ಗಾಯಗೊಂಡ ವ್ಯಕ್ತಿಯನ್ನು ಮುದುಕಪ್ಪ ಬನ್ನಿಕಟ್ಟಿ ಎಂದು ತಿಳಿದು ಬಂದಿದೆ.

ಘಟನೆ ಸಂಬಂಧ ಸ್ಥಳೀಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಘಟನಾ ಸ್ಥಳಕ್ಕೆ ಗಂಗಾವತಿ ಡಿವೈಎಸ್ಪಿ ಹಾಗೂ ಕುಷ್ಟಗಿ ಸಿಪಿಐ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ: Terror Attack: ಟರ್ಕಿಯಲ್ಲಿ ಭಯೋತ್ಪಾದಕ ದಾಳಿ… ಮೂವರು ಮೃತ್ಯು, ಹಲವರು ಗಂಭೀರ

Advertisement

Udayavani is now on Telegram. Click here to join our channel and stay updated with the latest news.

Next