Advertisement

ಭೀಕರ ರಸ್ತೆ ಅಪಘಾತ: ಬೈಕಿನಲ್ಲಿದ್ದ ತಂದೆ- ಮಗ ಸ್ಥಳದಲ್ಲೇ ಸಾವು

07:06 PM Jan 18, 2021 | Team Udayavani |

ಗಂಗಾವತಿ: ಬಸ್ ಹಾಗೂ ಸ್ಕೂಟಿ ಮಧ್ಯೆ ನಡೆದ ರಸ್ತೆ ಅಪಘಾತದಲ್ಲಿ ಬೈಕಿನಲ್ಲಿದ್ದ ತಂದೆ ಮಗ ಸ್ಥಳದಲ್ಲಿ ಮೃತಪಟ್ಟ ಘಟನೆ ತಾಲೂಕಿನ ಜಂಗಮರಕಲ್ಗುಡಿ ಗ್ರಾಮದಲ್ಲಿ ಸೋಮವಾರ ಸಂಜೆ ನಡೆದಿದೆ.

Advertisement

ಮೃತಪಟ್ಟವರನ್ನು ಗಂಗಾವತಿ ಜಯನಗರ ಗುಡ್ಡದಕ್ಯಾಂಪಿ ಹನುಮಂತ ನಾಯಕ(32), ಮತ್ತು ಪವನ ಅಲಿಯಾಸ್ ಪ್ರವೀಣಕುಮಾರ ಎಂದು ಗುರುತಿಸಲಾಗಿದೆ.

ಜಂಗಮರಕಲ್ಗುಡಿ ಗ್ರಾಮದಲ್ಲಿದ್ದ ಸಂಬಂಧಿಕರನ್ನು ಮಾತನಾಡಿಸಿ ಸ್ಕೂಟಿಯಲ್ಲಿ ಗಂಗಾವತಿಗೆ ಬರುವ ಸಂದರ್ಭದಲ್ಲಿ ಹುಬ್ಬಳ್ಳಿ ಸಿಂಧನೂರು ಮಾರ್ಗವಾಗಿ ಚಲಿಸುವ ಸಿಂಧನೂರು ಘಟಕದ ಕೆ ಎಸ್ ಆರ್ ಟಿ ಸಿ ಬಸ್ ಹಾಗೂ ಸ್ಕೂಟಿ ಮಧ್ಯೆ ಅಪಘಾತ ಸಂಭವಿಸಿದ್ದು, ಬಸ್ಸಿನ ಮುಂದಿನ ಚಕ್ರದಲ್ಲಿ ಸ್ಕೂಟಿ ಹಾಗೂ ಮಗು ಸಿಕ್ಕಿಹಾಕಿಕೊಂಡಿದ್ದರೆ, ಸ್ಪಲ್ಪ ದೂರದಲ್ಲಿ ಮೃತ ಹನುಮಂತ ನಾಯಕ ಅವರ ದೇಹ ಬಿದ್ದಿರುವುದು ಕಂಡು ಬಂದಿದೆ.

ಇದನ್ನೂ ಓದಿ:ವ್ಯಾಪಾರಿಯಿಂದ ಹಣ ದೋಚಿದ ಪ್ರಕರಣ : ಹನೂರು ಪೊಲೀಸರಿಂದ 4 ಮಂದಿ ಆರೋಪಿಗಳ ಬಂಧನ

ಈ ಸಂದರ್ಭದಲ್ಲಿ  ಇದೇ ಮಾರ್ಗದಲ್ಲಿ ತೆರಳುತ್ತಿದ್ದ ಕನಕಗಿರಿ ಶಾಸಕ ದಡೇಸೂಗೂರು ಬಸವರಾಜ ತಮ್ಮ ವಾಹನ ನಿಲ್ಲಿಸಿ ಪೊಲೀಸರಿಗೆ ಕರೆ ಮಾಡಿ ಜನ ಮತ್ತು ವಾಹನ ಸಂಚಾರ ನಿಲುಗಡೆ‌ ಮಾಡಿಸುವ ಮೂಲಕ ಮೃತದೇಹಗಳನ್ನು ಆಸ್ಪತ್ರೆಗೆ ಸಾಗಿಸಲು ನೆರವಾದರು.

Advertisement

ಗ್ರಾಮೀಣ ಪೊಲೀಸ್ ಠಾಣೆ ಪಿಐ ಉದಯರವಿ ಹಾಗೂ ಪಿಎಸ್ಐ ಜೆ.ದೊಡ್ಡಪ್ಪ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

Advertisement

Udayavani is now on Telegram. Click here to join our channel and stay updated with the latest news.

Next