Advertisement

ಕಳ್ಳತನಕ್ಕೆಂದು ಮನೆಗೆ ನುಗ್ಗಿದವ ಆತ್ಮಹತ್ಯೆ!

12:30 PM Oct 23, 2022 | Team Udayavani |

ಬೆಂಗಳೂರು: ಸಾಫ್ಟ್ವೇರ್‌ ಎಂಜಿನಿಯರ್‌ ಮನೆಗೆ ನುಗ್ಗಿದ ಕಳ್ಳನೊಬ್ಬ ಮನೆಯ ದೇವರ ಕೋಣೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಇಂದಿರಾನಗರ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

Advertisement

ಅಸ್ಸಾಂ ಮೂಲದ ದಿಲೀಪ್‌ ಕುಮಾರ್‌(46) ಆತ್ಮಹತ್ಯೆ ಮಾಡಿಕೊಂಡವ. ಮನೆ ಮಾಲೀಕರು ಕುಟುಂಬ ಸಹಿತ ಯುರೋಪ್‌ ಪ್ರವಾಸ ಹೋಗಿದ್ದು, ಶುಕ್ರವಾರ ಸಂಜೆ ವಾಪಸ್‌ ಬಂದಿದ್ದಾರೆ. ಬಾಗಿಲು ತೆಗೆಯುತ್ತಿದ್ದಂತೆ ದೇವರ ಕೋಣೆಯಲ್ಲಿ ವ್ಯಕ್ತಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವುದು ಗೊತ್ತಾಗಿದೆ. ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಸ್ಥಳಕ್ಕೆ ಬಂದ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದಾಗ, ದಿಲೀಪ್‌ ಕುಮಾರ್‌ ಮನೆ ಕಳ್ಳ ಎಂಬುದು ಗೊತ್ತಾಗಿದೆ. ಈತನ ವಿರುದ್ಧ ಜೆ.ಬಿ.ನಗರ ಠಾಣೆಯಲ್ಲಿ ಕಳ್ಳತನ ಪ್ರಕರಣ ದಾಖಲಾಗಿದೆ ಎಂದು ಪೂರ್ವ ವಿಭಾಗದ ಡಿಸಿಪಿ ಭೀಮಾಶಂಕರ್‌ಗುಳೇದ್‌ ಹೇಳಿದರು.

ಶುಕ್ರವಾರ ಮುಂಜಾನೆ ಮನೆಗೆ ನುಗ್ಗಿರುವ ಕಳ್ಳ ಇಲ್ಲಿಯೇ ಸ್ನಾನ ಮಾಡಿದ್ದಾನೆ. ನಂತರ ಸಂಜೆವರೆಗೂ ಮನೆ ಶೋಧಿಸಿದ್ದಾನೆ. ಬಳಿಕ ದೇವರ ಕೋಣೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಅವರು ಹೇಳಿದರು.

ಘಟನೆ ಸಂಬಂಧ ಇಂದಿರಾನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next