Advertisement

Shiradi ಘಾಟ್‌ನಲ್ಲಿ ವಾಹನ ಬೆಂಕಿಗೆ ಆಹುತಿ

09:22 PM Sep 11, 2024 | Team Udayavani |

ಸಕಲೇಶಪುರ: ತಾಲೂಕಿನ ಶಿರಾಡಿ ಘಾಟಿ ಮೂಲಕ ಹಾದು ಹೋಗಿರುವ ರಾಷ್ಟ್ರೀಯ ಹೆದ್ದಾರಿ 75 ತಾಲೂಕಿನ ಮಾರನಹಳ್ಳಿ ಗ್ರಾಮದ ಸಮೀಪ ಜೋಡಿ ತಿರುವು ಪ್ರದೇಶದಲ್ಲಿ ಬುಧವಾರ ಮಂಗಳೂರಿನಿಂದ ಬೆಂಗಳೂರು ಕಡೆಗೆ ಆಗಮಿಸುತ್ತಿದ್ದ ಕ್ಯಾಂಟರ್‌ ಲಾರಿಯೊಂದರಲ್ಲಿ ಅಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದ್ದು, ಚಾಲಕ ಲಾರಿಯನ್ನು ತತ್‌ಕ್ಷಣ ನಿಲ್ಲಿಸಿ ಹೊರಗೆ ಹಾರಿ ಪ್ರಾಣ ಉಳಿಸಿಕೊಂಡಿದ್ದಾನೆ.

Advertisement

ಹೆದ್ದಾರಿ ಬದಿಯಲ್ಲಿ ಇತರ ವಾಹನ ಸವಾರರು ನೋಡನೋಡುತ್ತಿದ್ದಂತೆ ವಾಹನ ಸಂಪೂರ್ಣ ಬೆಂಕಿಗೆ ಅಹುತಿಯಾಗಿ ಭಸ್ಮವಾಗಿದೆ. ಸಕಲೇಶಪುರ ಅಗ್ನಿಶಾಮಕ ದಳದವರು ಆಗಮಿಸಿ ಬೆಂಕಿ ನಂದಿಸಿದರೂ, ವಾಹನ ಸಂಪೂರ್ಣ ಭಸ್ಮವಾಗಿದೆ. ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next