Advertisement

Israel-Hamas ಯುದ್ಧ ಪೀಡಿತ ಇಸ್ರೇಲ್ ನಲ್ಲಿ ಸಿಲುಕಿರುವ ವಿಜಯಪುರ ವಿಜ್ಞಾನಿ

09:59 PM Oct 10, 2023 | Shreeram Nayak |

ವಿಜಯಪುರ: ಇಸ್ರೇಲ್ ದೇಶಕ್ಕೆ ಭೇಟಿ ನೀಡಿರುವ ವಿಜಯಪುರದ ಕೃಷಿ ವಿಜ್ಞಾನಿ ಪ್ರೊ. ಸೋಮೇಶ ಯುದ್ಧ ಪೀಡಿತ ಪ್ರದೇಶದಲ್ಲಿ ಸಿಲುಕಿದ್ದು, ಗಾಯಗೊಂಡಿರುವ ಮಾಹಿತಿ ಲಭ್ಯವಾಗಿದೆ. ಆದರೆ ಅಪಾಯದಿಂದ ಪಾರಾಗಿದ್ದಾರೆ.

Advertisement

ವಿಜಯಪುರದ ಹಿಟ್ನಳ್ಳಿ ಕೃಷಿ ಮಹಾವಿದ್ಯಾಲಯದಲ್ಲಿ ಪ್ರೊಫೆಸರ್ ಆಗಿರುವ ಸೋಮೇಶ, ಕುಟುಂಬದ ಸದಸ್ಯರೊಂದಿಗೆ ನಿರಂತರ ಸಂಪರ್ಕದಲ್ಲಿ ಇದ್ದಾರೆ.

ಈ ಕುರಿತು ಅಧಿಕೃತ ಮಾಹಿತಿ ನೀಡಿರುವ ವಿಜಯಪುರ ಜಿಲ್ಲಾಡಳಿತ, ಇಸ್ರೇಲ್ ಯುದ್ಧ ಪೀಡಿತ ಪ್ರದೇಶದಲ್ಲಿ ಸಿಲುಕಿರುವವರನ್ನು ಸುರಕ್ಷಿತವಾಗಿ ತವರಿಗೆ ಕರೆತರಲು ಕರ್ನಾಟಕ ವಿಪತ್ತು ನಿರ್ವಹಣಾ ಪ್ರಾಧಿಕಾರದೊಂದಿಗೆ ಜಿಲ್ಲಾಡಳಿತ ಸಂಪರ್ಕದಲ್ಲಿದ್ದು, ಸೋಮೇಶ ಅವರನ್ನು ಕರೆತರಲು ವ್ಯವಸ್ಥೆ ಮಾಡಲಾಗುತ್ತಿದೆ.

ಈ ಮಧ್ಯೆ ಇಸ್ರೇಲಿನ ಟೆಲ್ ಅವಿವಾದಿಂದ ಭಾರತಕ್ಕೆ ಬರುವ ವಿಮಾನ ಬುಧವಾರ ಭಾರತೀಯ ಕಾಲಮಾನ ಬೆ.10 ಕ್ಕೆ ಹೊರಡಲಿದೆ. ಹೀಗಾಗಿ ಯುದ್ಧ ಪೀಡಿತ ಪ್ರದೇಶದಲ್ಲಿ ಸಿಲುಕಿರುವ ಬಾಧಿತರು, ಅವರ ಕುಟುಂಬದವರು ಯಾರೇ ಇದ್ದರೂ ಜಿಲ್ಲಾಡಳಿತವನ್ನು ಸಂಪರ್ಕಿಸುವಂತೆ ಕೋರಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next