Advertisement

ಪರೀಕ್ಷೆ ಬರೆಯಲು ಉಕ್ಕಿ ಹರಿಯುವ ನದಿ ಈಜಿ ಬಂದ ಯುವತಿ: ವಿಡಿಯೋ ವೈರಲ್

12:12 PM Sep 10, 2022 | Team Udayavani |

ವಿಜಯನಗರಂ: ಪರೀಕ್ಷೆ ಬರೆಯಲು ಹೋಗಲು 21 ವರ್ಷದ ಯುವತಿಯೊಬ್ಬರು ಉಕ್ಕಿ ಹರಿಯುತ್ತಿದ್ದ ನದಿಯನ್ನು ಈಜಿ ದಾಟಿದ ಘಟನೆ ಆಂಧ್ರ ಪ್ರದೇಶದ ವಿಜಯನಗರಂ ನಲ್ಲಿ ಶುಕ್ರವಾರ ನಡೆದಿದೆ.

Advertisement

ಗಜಪತಿನಗರಂ ಮಂಡಲದ ಮರಿವಲಸ ಗ್ರಾಮದ ತಡ್ಡಿ ಕಲಾವತಿ ಎಂಬಾಕೆಯೇ ಈಜಿ ನದಿ ದಾಟಿದ ಯುವತಿ. ಈಕೆ ಶುಕ್ರವಾರ ಚಂಪಾವತಿ ನದಿಯನ್ನು ಈಜಿದ್ದಾರೆ.

ಶನಿವಾರ ನಡೆಯಬೇಕಿದ್ದ ಪರೀಕ್ಷೆಗೆ ಹಾಜರಾಗಲೆಂದು ಜೀವವನ್ನೇ ಪಣಕ್ಕಿಟ್ಟು ಕಲಾವತಿ ತನ್ನ ಇಬ್ಬರು ಸಹೋದರರ ನೆರವಿನೊಂದಿಗೆ ಪ್ರವಾಹಕ್ಕೆ ಸಿಲುಕಿದ ಚಂಪಾವತಿ ನದಿಯನ್ನು ದಾಟಿದ್ದಾಳೆ.

35 ಸೆಕೆಂಡುಗಳ ಸುದೀರ್ಘ ವೀಡಿಯೊದಲ್ಲಿ, ಕಲಾವತಿಯ ಸಹೋದರರು ಅವಳನ್ನು ತಮ್ಮ ಭುಜದ ಮೇಲೆ ಹೊತ್ತುಕೊಂಡು ನದಿಯ ಇನ್ನೊಂದು ಬದಿಗೆ ಕರೆದುಕೊಂಡು ಬರುವುದನ್ನು ಕಾಣಬಹುದು.

ಇದನ್ನೂ ಓದಿ:ಬಾಯ್ಕಾಟ್ ಟ್ರೆಂಡ್ ನಡುವೆಯೂ ರಣಬೀರ್ ಚಿತ್ರ ‘ಬ್ರಹ್ಮಾಸ್ತ್ರ’ ಮೊದಲ ದಿನ ಗಳಿಸಿದ್ದೆಷ್ಟು?

Advertisement

ಭಾರೀ ಮಳೆಯಿಂದಾಗಿ, ಆಂಧ್ರ ಪ್ರದೇಶದ ಉತ್ತರ ಕರಾವಳಿಯ ಹಲವಾರು ನದಿಗಳು ತುಂಬಿ ಹರಿಯುತ್ತಿವೆ. ಪ್ರವಾಹದ ಕಾರಣದಿಂದ ಬೇರೆ ಯಾವುದೇ ಸಂಚಾರ ವ್ಯವಸ್ಥೆ ಇಲ್ಲದ ಕಾರಣ ಕಲಾವತಿಯ ಸಹೋದರರು ನದಿ ದಾಟಲು ಸಹಾಯ ಮಾಡಲು ನಿರ್ಧರಿಸಿದರು.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next