Advertisement

Sullia: ಮಹಿಳೆಗೆ ಪೆಟ್ರೋಲ್‌ ಸುರಿದು ಬೆಂಕಿ ಹಚ್ಚಿದ!

01:28 AM Oct 14, 2024 | Team Udayavani |

ಸುಳ್ಯ: ಮಹಿಳೆ ಮೇಲೆ ಪೆಟ್ರೋಲ್‌ ಸುರಿದು ಬೆಂಕಿ ಹಚ್ಚಿ ಕೊಲೆಗೆ ಯತ್ನಿಸಿರುವ ಬಗ್ಗೆ ಬೆಳ್ಳಾರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

ಸುಳ್ಯ ತಾಲೂಕಿನ ಕೊಡಿಯಾಲ ಗ್ರಾಮದ ಕಲ್ಲರ್ಪೆ ಜಯಭಾರತಿ (56) ಅವರು ಮನೆಯಲ್ಲಿ ಶನಿವಾರ ರಾತ್ರಿ ಮಲಗಿದ್ದ ಸಂದರ್ಭದಲ್ಲಿ ಮಹಿಳೆಯ ಬಾವ ಶಂಕರ ಅವರು ಪೆಟ್ರೋಲ್‌ ಸುರಿದು ಬೆಂಕಿ ಹಚ್ಚಿದ್ದಾರೆ ಎಂದು ಆರೋಪಿಸಲಾಗಿದೆ.

ಗಂಭೀರ ಗಾಯಗೊಂಡಿರುವ ಮಹಿಳೆಯನ್ನು ಸಂಬಂಧಿಕರು ಸುಳ್ಯದ ಆಸ್ಪತ್ರೆಗೆ ಕರೆತಂದು ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.

ಬೆಂಕಿ ಹಚ್ಚಿರುವ ವ್ಯಕ್ತಿಗೂ ಗಾಯವಾಗಿದ್ದು, ಆತನೂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ ಎಂದು ತಿಳಿದುಬಂದಿದೆ. ಕೌಟುಂಬಿಕ ವಿವಾದದ ಹಿನ್ನೆಲೆಯಲ್ಲಿ ಕೃತ್ಯ ಎಸಗಿರುವ ಬಗ್ಗೆ ಶಂಕಿಸಲಾಗಿದೆ.

ಬೆಳ್ಳಾರೆ ಠಾಣೆಯಲ್ಲಿ ಕೊಲೆಯತ್ನ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next