Advertisement

Hosanagar: ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ ಪ್ರಕರಣ; ದೃಶ್ಯ ಸಿಸಿಟಿವಿಯಲ್ಲಿ ಸೆರೆ

02:22 PM Aug 11, 2024 | Poornashri K |

ಹೊಸನಗರ: ತಾಲೂಕಿನ ಮತ್ತಿಕೈ ಗ್ರಾಪಂ ವ್ಯಾಪ್ತಿಯ ಚಂಪಕಾಪುರ ಗ್ರಾಮದಲ್ಲಿ ಮಕ್ಕಳನ್ನು ಬಾವಿಗೆ ದೂಡಿ ನಂತರ ತಾನೂ ಆತ್ಮಹತ್ಯೆ ಮಾಡಿಕೊಂಡ ಘಟನೆಗೆ ಸಂಬಂಧಿಸಿದ ಸಿಸಿಟಿವಿ ದೃಶ್ಯ ಲಭಿಸಿದೆ.

Advertisement

ಎರಡು ಪುಟ್ಟ ಮಕ್ಕಳನ್ನು ಬಾವಿಗೆ ದೂಡಿ ತಾನು ಕೂಡ ಬಾವಿಗೆ ಹಾರಿ ಮಹಿಳೆಯೋರ್ವಳು ಆತ್ಮಹತ್ಯೆ ಮಾಡಿಕೊಂಡ ಹೃದಯ ವಿದ್ರಾವಕ ಘಟನೆ ತಾಲೂಕಿನ ಮತ್ತಿಕೈ ವ್ಯಾಪ್ತಿಯಲ್ಲಿ ಬುಧವಾರ( ಆ. 7) ನಡೆದಿತ್ತು. ಚಂಪಕಾಪುರ ನಿವಾಸಿ ರಾಜೇಶ್ ಎಂಬುವವರ ಪತ್ನಿ ವಾಣಿ(32), ಮಕ್ಕಳಾದ ಸಮರ್ಥ(12), ಸಂಪದ (6) ಮೃತಪಟ್ಟಿದ್ದಾರೆ.

ಸಿಸಿಟಿವಿಯಲ್ಲಿ ಸೆರೆಯಾದ ದೃಶ್ಯ:

ಆತ್ಮಹತ್ಯೆಗೂ‌ ಮುನ್ನ ತಾಯಿ ವಾಣಿ ತನ್ನ ಇಬ್ಬರು  ಮಕ್ಕಳನ್ನು ಕರೆದುಕೊಂಡು ಬಾವಿ ಕಡೆಗೆ ಹೋಗುತ್ತಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಈ ವೇಳೆ ಮಕ್ಕಳ‌ ಕೂಗಾಟ ಸಿಸಿಟಿವಿಯಲ್ಲಿ ಕೇಳಿಬಂದಿದ್ದು ಮನಕರಗುವಂತಿದೆ.

Advertisement

Udayavani is now on Telegram. Click here to join our channel and stay updated with the latest news.

Next