Advertisement

Gangavati: ಪತಿ ಹುಡುಕಿಕೊಂಡು ಗಂಗಾವತಿಗೆ ಹೋಗಿದ್ದ ಮಹಿಳೆ ಮೇಲೆ ಅತ್ಯಾಚಾರ  

11:44 AM Feb 12, 2024 | Team Udayavani |

ಗಂಗಾವತಿ: ನಗರದ ಉದ್ಯಾನವೊಂದರಲ್ಲಿ ಬೆಂಗಳೂರಿನ ಗೊರಗುಂಟೆ ಪಾಳ್ಯದ ಗೃಹಿಣಿ ಮೇಲೆ ಅತ್ಯಾಚಾರ ನಡೆದಿರುವ ಆರೋಪ ಕೇಳಿ ಬಂದಿದ್ದು, ಗಂಗಾವತಿ ನಗರ ಠಾಣೆ ಪೊಲೀಸರು 6 ಜನರನ್ನು ಬಂಧಿಸಿದ್ದಾರೆ.

Advertisement

ಬೆಂಗಳೂರಿನ ಸಂತ್ರಸ್ತೆ ಕಾರಟಗಿ ತಾಲೂಕಿನ ಸಿದ್ದಾಪುರ ಮೂಲದ ವ್ಯಕ್ತಿಯನ್ನು ಈ ಹಿಂದೆ ವಿವಾಹವಾಗಿದ್ದರು. ಇಬ್ಬರ ನಡುವೆ ಜಗಳವಾಗಿತ್ತು. ಪತಿ ಹುಡುಕಿಕೊಂಡು ಗಂಗಾವತಿ ಬಸ್‌ ನಿಲ್ದಾಣಕ್ಕೆ ಶುಕ್ರವಾರ ರಾತ್ರಿ ಆಗಮಿಸಿದ್ದ ಮಹಿಳೆ, ಪತಿ ಭೇಟಿ ಮಾಡಿದ್ದಾರೆ. ಈ ವೇಳೆ ಪತಿ-ಪತ್ನಿ ನಡುವೆ ಜಗಳವಾಗಿದೆ. ಜಗಳ ಬಿಡಿಸಲು ತೆರಳಿದ ಆರು ಜನರ ಗುಂಪೊಂದು ಪತಿ ಮಂಜು ನಾಥನಿಗೆ ಬುದ್ಧಿ ಹೇಳಿದಂತೆ ಮಾಡಿ ಆತನ ಮೇಲೆಯೂ ಹಲ್ಲೆ ಮಾಡಿದೆ. ಬಳಿಕ ಮಹಿಳೆಯನ್ನು ಸಮೀಪದ ನೆಹರೂ ಉದ್ಯಾನಕ್ಕೆ ಎಳೆದೊಯ್ದು ಅತ್ಯಾಚಾರ ಎಸಗಿದೆ ಎನ್ನಲಾಗಿದೆ.

ಈ ಕುರಿತು ಸಂತ್ರಸ್ತೆ ಲಿಂಗರಾಜ ಎನ್ನುವ ವ್ಯಕ್ತಿಯು ಅತ್ಯಾಚಾರ ಮಾಡಿದ್ದಾನೆ ಎಂದು ಆರೋಪಿಸಿ ನಗರ ಠಾಣೆಗೆ ದೂರು ನೀಡಿದ್ದಾಳೆ. ಪೊಲೀಸರು ಐವರ ಮೇಲೆ ಕೊಲೆ ಯತ್ನ ಪ್ರಕರಣ ದಾಖಲಿಸಿದ್ದಾರೆ. ಆರು ಜನರನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೊಪ್ಪಿಸಿದ್ದಾರೆ.

 

Advertisement

Udayavani is now on Telegram. Click here to join our channel and stay updated with the latest news.

Next