Advertisement

ಕರಾವಳಿಯಲ್ಲಿ ವಿಶ್ವ ಮಟ್ಟದ ಅಕ್ವೇರಿಯಂ

01:28 AM Oct 28, 2020 | mahesh |

ಮಂಗಳೂರು: ಕರಾವಳಿಯಲ್ಲಿ ವಿಶ್ವಮಟ್ಟದ ಅಕ್ವೇರಿಯಂ ನಿರ್ಮಾಣ ಮಾಡುವ ಪ್ರಸ್ತಾವ ಇದ್ದು, ಇದಕ್ಕೆ ಸೂಕ್ತ ಸ್ಥಳ ಗುರುತಿಸಿ ಕೊಡುವಂತೆ ಮೀನುಗಾರಿಕೆ ಮತ್ತು ದ.ಕ. ಜಿಲ್ಲಾ ಉಸ್ತವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ಮೀನುಗಾರಿಕಾ ಕಾಲೇಜಿಗೆ ಸೂಚಿಸಿದ್ದಾರೆ.

Advertisement

ಅವರು ಎಕ್ಕೂರಿನ ಮೀನುಗಾರಿಕಾ ಕಾಲೇಜಿನಲ್ಲಿ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಈ ವಿಷಯ ತಿಳಿಸಿದರು. ಮೀನುಗಾರಿಕಾ ಕಾಲೇಜಿನ ಡೀನ್‌ ಪ್ರೊ| ಸೆಂಥಿಲ್‌ ವೇಲು ಅವರು ವಿಷಯ ಪ್ರಸ್ತಾಪಿಸಿ, ಕರ್ನಾಟಕದಲ್ಲಿ 120 ದ್ವೀಪಗಳು ಇವೆ. ಈ ಪೈಕಿ 25 ದ್ವೀಪಗಳು 200 ಕಿ.ಮಿ. ವ್ಯಾಪ್ತಿಯಲ್ಲಿ ಇವೆ ಇವುಗಳನ್ನು ಪ್ರವಾಸಿ ತಾಣಗಳನ್ನಾಗಿ ಅಭಿವೃದ್ಧಿ ಪಡಿಸಲು ಅವಕಾಶವಿದೆ. ಉತ್ತರ ಕನ್ನಡ ಜಿಲ್ಲೆಯ ಕಾರವಾರದಲ್ಲಿ ವಿಶ್ವ ಮಟ್ಟದ ಅಕ್ವೇರಿಯಂ ನಿರ್ಮಾಣ ಮಾಡಬಹುದಾಗಿದೆ ಎಂದು ಹೇಳಿದರು.

ಇದಕ್ಕೆ ಪ್ರತಿಕ್ರಿಯಿಸಿದ ಸಚಿವ ಕೋಟ ಅವರು, ಜನರ ಅಥವಾ ಯಾರದೇ ಆಕ್ಷೇಪಣೆ ಇಲ್ಲದ, ಸೂಕ್ತ ಜಾಗವನ್ನು ಕರಾವಳಿಯ 3 ಜಿಲ್ಲೆಗಳ ವ್ಯಾಪ್ತಿಯ ಎಲ್ಲಾದರೂ ಹುಡುಕಿ ಕೊಡಿ. ಪಿಪಿಪಿ ಮಾದರಿಯಲ್ಲಿ ಅಕ್ವೇರಿಯಂ ನಿರ್ಮಾಣ ಮಾಡೋಣ ಎಂದರು.

ದ್ವೀಪದಲ್ಲಿ ಯಾವುದೇ ಯೋಜನೆ ಕೈಗೆತ್ತಿ ಕೊಳ್ಳುವಾಗ ಅದು ಮೀನುಗಾರಿಕೆಗೆ ಪ್ರಯೋಜನ ಆಗುವಂತಿರಬೇಕು ಎಂದು ಮೀನುಗಾರ ಮುಖಂಡರಾದ ಶಶಿ ಕುಮಾರ್‌, ನಿತಿನ್‌ ಕುಮಾರ್‌ ಮತ್ತು ಮೋಹನ್‌ ಬೆಂಗ್ರೆ ಅವರು ಹೇಳಿದರು. ಮೀನುಗಾರಿಕಾ ಇಲಾಖೆಯ ಉಪ ನಿರ್ದೇಶಕ ಪಾರ್ಶ್ವನಾಥ ಹಾಗೂ ಮೀನುಗಾರಿಕಾ ಕಾಲೇಜಿನ ಪ್ರಾಧ್ಯಾ ಪಕರು ಸಭೆಯಲ್ಲಿ ಭಾಗವಹಿಸಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next