Advertisement

Indi; ಕುಡಿಯುವ ನೀರಿಗಾಗಿ ಒತ್ತಾಯ; ಮೊಬೈಲ್‌ ಟವರ್‌ ಹತ್ತಿದ ಯುವಕ

06:37 PM Mar 19, 2024 | Team Udayavani |

ಇಂಡಿ:ಕುಡಿಯುವ ನೀರಿನ ಸಮಸ್ಯೆಗೆ ಬೇಸತ್ತು ಯುವಕನೊಬ್ಬ ಪಟ್ಟಣದ ಬಸ್‌ ನಿಲ್ದಾಣದ ಎದುರಿಗೆ 250 ಅಡಿ ಎತ್ತರದ ಬಿಎಸ್‌ಎನ್‌ಎಲ್‌ ಟವರ್‌ ಏರಿದ ಘಟನೆ ಪಟ್ಟಣದಲ್ಲಿ ಮಂಗಳವಾರ ಬೆಳ್ಳಂಬೆಳಗ್ಗೆ ನಡೆದಿದೆ.

Advertisement

ಇಂಡಿ ತಾಲೂಕಿನ ತೆಗ್ಗೆಳ್ಳಿ ಗ್ರಾಮದ ಶಂಕರ ಚಂದ್ರಶೇಖರ ಕಡಣಿ ಎಂಬಾತ ತೆಗ್ಗಳ್ಳಿ ಗ್ರಾಮದಲ್ಲಿ ಕುಡಿಯುವ ನೀರಿಗೆ ತತ್ವಾರ ಎದುರಾಗಿದೆ. ಅಧಿಕಾರಿಗಳು ಸ್ಪಂದಿಸುತ್ತಿಲ್ಲ. ಜನ-ಜಾನುವಾರು ಪರದಾಡುವಂತಾಗಿದೆ ಎಂದು ಬೆಳಗ್ಗೆ 6 ಗಂಟೆ ಸುಮಾರಿಗೆ ಟವರ್‌ ಏರಿದ್ದಾನೆ.

ವಿಷಯ ಅರಿತ ಪೊಲೀಸ್‌ ಹಾಗೂ ಅಗ್ನಿಶಾಮಕ ದಳ ಸಿಬ್ಬಂದಿ ಆಗಮಿಸಿ ಕುಡಿಯುವ ನೀರಿನ ಸಮಸ್ಯೆ ಬಗೆಹರಿಸುವುದಾಗಿ ಯುವಕನ ಮನವೊಲಿಸಿ ಕೆಳಗಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next