Advertisement

ಮಲ್ಪೆ: ಆರ್ಥಿಕ ಸಮಸ್ಯೆ ಹಿನ್ನಲೆಯಲ್ಲಿ ಬೋಟ್ ಗೆ ನೇಣು ಹಾಕಿ ಯುವಕ ಆತ್ಮಹತ್ಯೆ

01:41 PM Jun 10, 2020 | keerthan |

ಉಡುಪಿ: ಹಣಕಾಸಿನ ಸಂಕಷ್ಟದಿಂದ ಮನನೊಂದ ಯುವಕನೋರ್ವ ಲಂಗರು ಹಾಕಿದ್ದ ಬೋಟ್ ಗೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಬುಧವಾರ ಮಲ್ಪೆ ಬಂದರಿನಲ್ಲಿ ನಡೆದಿದೆ.

Advertisement

ಮೃತ ಯುವಕನನ್ನು ತೊಟ್ಟಂ ಸಮೀಪದ ಪೌಂಜಿ ಗುಡ್ಡೆ ನಿವಾಸಿ ಭಾಗ್ಯರಾಜ್ ಎಂದು ಗುರುತಿಸಲಾಗಿದೆ.

ಈತ ಸಾಲ ಮಾಡಿ ಮೀನುಗಾರಿಕಾ ಬೋಟ್ ಮತ್ತು ಮನೆ ಖರೀದಿ ಮಾಡಿದ್ದ ಎನ್ನಲಾಗಿದೆ. ಆದರೆ ನಂತರ ವ್ಯವಹಾರದಲ್ಲಿ ನಷ್ಟ ಉಂಟಾಗಿತ್ತು ಎನ್ನಲಾಗಿದೆ. ಈ ಕಾರಣದಿಂದ ಮಲ್ಪೆ ಬಂದರಿನಲ್ಲಿ ಲಂಗರು ಹಾಕಿದ್ದ ಬೋಟ್ ಗೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಘಟನಾ ಸ್ಥಳಕ್ಕೆ ಮಲ್ಪೆ ಠಾಣಾ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next