Advertisement

Tallur : ಬಾವಿಗೆ ಹಾರಿ ಯುವಕ ಆತ್ಮಹತ್ಯೆ

08:42 PM Aug 29, 2024 | Team Udayavani |

ಕುಂದಾಪುರ: ತಲ್ಲೂರು ಗ್ರಾಮದ ಪಿಂಗಾಣಿಗುಡ್ಡೆ ನಿವಾಸಿ ನಾರಾಯಣ ಪೂಜಾರಿ ಅವರ ಪುತ್ರ ಕೃಷ್ಣ ಪೂಜಾರಿ (35) ಹಟ್ಟಿಯಂಗಡಿಯ ರೈಲು ಹಳಿ ಸಮೀಪದ ಸರಕಾರಿ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

Advertisement

ಕೂಲಿ ಕೆಲಸ ಮಾಡಿಕೊಂಡಿದ್ದ ಅವರು ಮದ್ಯ ವ್ಯಸನಿಯಾಗಿ ಸರಿಯಾಗಿ ಕೆಲಸಕ್ಕೂ ಹೋಗದೆ ಹಣದ ಅಡಚಣೆ ಅನುಭವಿಸುತ್ತಿದ್ದರು. ಇದೇ ವಿಚಾರವಾಗಿ ಜೀವನದಲ್ಲಿ ಜುಗುಪ್ಸೆಗೊಂಡು ಆ. 28ರ ಬೆಳಗ್ಗೆ 10 ಗಂಟೆಯಿಂದ ಆ. 29ರ ಬೆಳಗ್ಗೆ 9 ಗಂಟೆಯ ಅವಧಿಯಲ್ಲಿ ಬಾವಿಗೆ ಹಾರಿದ್ದಾರೆ ಎನ್ನಲಾಗಿದೆ.

ಸಹೋದರ ರಾಜು ಪೂಜಾರಿ ನೀಡಿದ ದೂರಿನಂತೆ ಕುಂದಾಪುರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next