Advertisement

Hebri ಬಾವಿ ಬಳಿ ದೀಪ ಇಡುವಾಗ ಕಾಲು ಜಾರಿ ಬಿದ್ದು ಯುವಕ ಸಾವು

11:11 PM Nov 13, 2023 | Team Udayavani |

ಹೆಬ್ರಿ: ದೀಪಾವಳಿ ಹಬ್ಬದ ಪ್ರಯುಕ್ತ ಆವರಣವಿಲ್ಲದ ಬಾವಿ ಬಳಿ ದೀಪ ಇಡುವಾಗ ಯುವಕನೊರ್ವ ಆಕಸ್ಮಿಕವಾಗಿ ಕಾಲು ಜಾರಿ ಬಾವಿಯ ನೀರಿಗೆ ಬಿದ್ದು ಮೃತಪಟ್ಟ ಘಟನೆ ನಡೆದಿದೆ.

Advertisement

ಹೆಬ್ರಿ ತಾಲೂಕು ಚಾರ ಗ್ರಾಮದ ಚಾರ ಬಸದಿ ಬಳಿ ನಿವಾಸಿ ಸಚಿನ್‌ (35) ಮೃತಪಟ್ಟ ಯುವಕ.

ನ. 12ರಂದು ಸಂಜೆ ದೀಪಾವಳಿ ಸಂದರ್ಭ ಮನೆಯ ಹತ್ತಿರದ ಬಾವಿ ಬಳಿ ಘಟನೆ ನಡೆದಿದ್ದು, ಹೆಬ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next