Advertisement

ಪಾವಗಡ: ವಿದ್ಯುತ್ ತಗುಲಿ ಯುವಕ ಸಾವು

04:22 PM Oct 28, 2022 | Team Udayavani |

ಪಾವಗಡ: ತಾಲೂಕಿನ ಕ್ಯಾತಗಾನಚೆರ್ಲು ಗ್ರಾಮದ ಬಳಿಯ ಸೋಲಾರ್ ಪಾರ್ಕ್ ನ ಅವಾದ್ ಪ್ಲಾಂಟ್ ನಲ್ಲಿ ವಿದ್ಯುತ್ ತಗುಲಿ ಯುವಕನೋರ್ವ ಶುಕ್ರವಾರ ಮಧ್ಯಾಹ್ನ ಮೃತಪಟ್ಟಿದ್ದಾರೆ.

Advertisement

ತಾಲೂಕಿನ ಚಿಕ್ಕಹಳ್ಳಿ ಗ್ರಾಮದ ಗೋಪಾಲ್(22)ಬಿನ್ ತಿಪ್ಪಣ್ಣ ಮೃತರು. ಯುವಕ ತಂತ್ರಜ್ಞನಾಗಿ ಸೋಲಾರ್ ಪ್ಲಾಂಟ್ ನಲ್ಲಿ ಕಾರ್ಯ ನಿರ್ವಹಿಸುತ್ತಿದ್ದರು. ಪ್ಲಾಂಟ್ ನಲ್ಲಿ ಕೆಲಸ ಮಾಡುವಾಗ ವಿದ್ಯುತ್ ತಗುಲಿ ಮೃತಪಟ್ಟಿದ್ದು, ತಿರುಮಣಿ ಪೊಲೀಸರು ಸ್ಥಳ ಪರಿಶೀಲನೆ ನಡೆಸಿದರು.

ಕೆಲ ದಿನಗಳ ಹಿಂದೆ ಗ್ರಾಮದ ಕೆರೆ ತುಂಬಿ ಸೋಲಾರ್ ಪ್ಲಾಂಟ್ ಮುಳುಗಡೆಯಾಗಿತ್ತು. ಅಧಿಕಾರಿಗಳು ಪರಿಹಾರ ಕೊಡಿಸುವುದಾಗಿ ರೈತರ ಮನವೊಲಿಸಿ ಕೆರೆ ನೀರು ಹೊರ ಬಿಡಿಸಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next