Advertisement

ಪೊಳಲಿ: ನರ್ತೆ ಹೆಕ್ಕುವ ವೇಳೆ ಕೆಸರಿನಲ್ಲಿ ಹೂತು ಯುವಕ ಸಾವು

02:26 PM Jul 21, 2022 | Team Udayavani |

ಬಂಟ್ವಾಳ: ಪೊಳಲಿ ಸಮೀಪದ ಕಲ್ಕುಟದ ಗದ್ದೆಯೊಂದರಲ್ಲಿ ನರ್ತೆ( ಶಂಕುಹುಳು) ಹೆಕ್ಕುವ ವೇಳೆ ಯುವಕನೋರ್ವ ನೀರು ಹಾಗೂ ಕೆಸರಿನಲ್ಲಿ ಹೂತು ಮೃತಪಟ್ಟ ಘಟನೆ ಬುಧವಾರ ನಡೆದಿದೆ.

Advertisement

ಕರಿಯಂಗಳ ಗ್ರಾಮದ ಸಾಣೂರುಪದವು ನಿವಾಸಿ ದಾಮೋದರ್(31) ಮೃತಪಟ್ಟ ಯುವಕ.

ದಾಮೋದರ್‌ ಗದ್ದೆಯ ಬದುವಿನಲ್ಲಿ ಕೂತು ನರ್ತೆ ಹೆಕ್ಕುತ್ತಿದ್ದ ವೇಳೆ ಆಯತಪ್ಪಿ ಗದ್ದೆಗೆ ಬಿದ್ದಿದ್ದಾರೆ. ಗದ್ದೆಯಲ್ಲಿ ನೀರಿನ ಜತೆಗೆ ಕೆಸರು ಕೂಡ ತುಂಬಿಕೊಂಡಿದ್ದು, ಈ ವೇಳೆ ಅವರ ಕುತ್ತಿಗೆವರೆಗೂ ಹೂತು ಹೋಗಿದ್ದಾರೆ. ಬಳಿಕ ಮೇಲಕ್ಕೆ ಬರಲು ಆಗದೆ ಮೃತಪಟ್ಟಿದ್ದಾರೆ.

ಇದನ್ನೂ ಓದಿ: ಮಂಗಳೂರು ಕಾಲೇಜು ವಿದ್ಯಾರ್ಥಿಗಳ ಲಿಪ್ ಲಾಕ್ ವಿಡಿಯೋ ವೈರಲ್! ವಿಡಿಯೋ ವೈರಲ್ ಮಾಡಿದಾತ ವಶಕ್ಕೆ

ಮೇಸ್ತ್ರಿ ಕೆಲಸ ನಿರ್ವಹಿಸುತ್ತಿದ್ದ ದಾಮೋದರ್ ಅವರು ತಂದೆ-ತಾಯಿ, ಪತ್ನಿ, ಸಣ್ಣ ಮಗು ಸೇರಿದಂತೆ ಕುಟುಂಬ ವರ್ಗವನ್ನು ಅಗಲಿದ್ದಾರೆ. ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next