Advertisement

ಕುಮಾರ ಪರ್ವತದಲ್ಲಿ ಯುವಕ ನಾಪತ್ತೆ: ಹುಡುಕಾಟಕ್ಕೆ ತೆರಳಿದ ತಂಡ

09:47 AM Sep 18, 2019 | keerthan |

ಸುಬ್ರಹ್ಮಣ್ಯ: ಪುಷ್ಪಗಿರಿ ವನ್ಯಧಾಮ ವ್ಯಾಪ್ತಿಯ ಕುಮಾರ ಪರ್ವತ ಚಾರಣಕ್ಕೆ ಶನಿವಾರ ತೆರಳಿದ ತಂಡದ ಪೈಕಿ ಬೆಂಗಳೂರು ಗಾಯತ್ರಿ ನಗರದ ನಿವಾಸಿ ಸಂತೋಷ್ ನಾಪತ್ತೆಯಾಗಿದ್ದು, ಹುಡುಕಾಟಕ್ಕೆ ನಾಲ್ಕು ತಂಡಗಳು ಮಂಗಳವಾರ ಬೆಳಿಗ್ಗೆ ಪುಷ್ಪಗಿರಿ ವನ್ಯಧಾಮದ ಗಿರಿಗದ್ದೆ ಕಡೆಗೆ ತೆರಳಿದ್ದಾರೆ.

Advertisement

ಪೊಲೀಸ್ ಇಲಾಖೆ, ಅರಣ್ಯ ಇಲಾಖೆ, ಗ್ರಾ.ಪಂಚಾಯತ್ ಅಧಿಕಾರಿಗಳನ್ನು ಒಳಗೊಂಡ ತಂಡದ ಜತೆ ಸುಬ್ರಹ್ಮಣ್ಯ ಸ್ಥಳಿಯ ಹಾಗೂ ದೇವರಗದ್ದೆಯ ನುರಿತ ಯುವಕರ ತಂಡ ಶೋಧಕ್ಕೆ ತೆರಳಿದೆ.

ಸುಬ್ರಹ್ಮಣ್ಯ ಪೊಲೀಸ್ ಠಾಣೆ ಅರಣ್ಯ ಇಲಾಖೆ ಅಧಿಕಾರಿಗಳು ಅಲ್ಲದೆ ಪುತ್ತೂರು, ಬೆಳ್ಳಾರೆ, ಸುಳ್ಯ ಮುಂತಾದ ಕಡೆಗಳಿಂದ ಸಿಬ್ಬಂದಿಗಳನ್ನು ಕರೆಸಿಕೊಳ್ಳಲಾಗಿದೆ.

ಸ್ಥಳಕ್ಕೆ ಪುತ್ತೂರು ಡಿವೈಎಸ್ಪಿ ದಿನಕರ ಶೆಟ್ಟಿ.ಸುಳ್ಯ ವ್ರತ್ತ ನಿರೀಕ್ಷಕ ಸತೀಶ್ ಭೇಟಿ ನೀಡಿ ಶೋಧ ಕಾರ್ಯಚರಣೆ ಕುರಿತು ತಂಡಗಳಿಗೆ ಮಾರ್ಗದರ್ಶನ ನೀಡಿದರು

ಬೆಂಗಳೂರಿಂದ ಆಗಮಿಸಿದ 12 ಮಂದಿ ಚಾರಣಿಗರ ತಂಡ ಶನಿವಾರ ಪುಷ್ಪಗಿರಿ ತಪ್ಪಲಿನ ಕುಮಾರ ಪರ್ವತಕ್ಕೆ ಚಾರಣಕ್ಕೆ ತೆರಳಿತ್ತು. ರವಿವಾರ ಗಿರಿಗದ್ದೆಯಿಂದ ವಾಪಸ್ ಆಗುವ ವೇಳೆ ಬೆಂಗಳೂರಿನ ಗಾಯತ್ರಿ ನಗರದ ಆಂಜನಮೂರ್ತಿ ಅವರ ಪುತ್ರ ಸಂತೋಷ್ ನಾಪತ್ತೆಯಾಗಿದ್ದ. ತಂಡದಲ್ಲಿ ಒಟ್ಟು 12 ಮಂದಿ ಇದ್ದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next