Advertisement

ಘಟಪ್ರಭಾ ನದಿಯಲ್ಲಿ ಕೊಚ್ಚಿಹೋಗಿ ಯುವಕ ಸಾವು

09:17 PM Sep 13, 2022 | Team Udayavani |

ಬಾಗಲಕೋಟೆ: ಜಿಲ್ಲೆಯ ಘಟಪ್ರಭಾ ನದಿ, ಅಪಾಯಮಟ್ಟ ಮೀರಿ ಹರಿಯುತ್ತಿದ್ದು, ನದಿ ದಡದಲ್ಲಿ ಕೂಡಿಸಿದ್ದ ವಿದ್ಯುತ್ ಪಂಪಸೆಟ್ ತರಲು ಹೋಗಿದ್ದ ಯುವಕನೊಬ್ಬ ಕೊಚ್ಚಿಕೊಂಡು ಹೋಗಿ ಮೃತಪಟ್ಟಿದ್ದಾನೆ.

Advertisement

ಇದನ್ನೂ ಓದಿ: ನಿಗದಿತ ಸಮಯದಲ್ಲಿ ಮಹಾಲಕ್ಷ್ಮೀ ಏತನೀರಾವರಿ ಯೋಜನೆ ಪೂರ್ಣ: ಸಿಎಂ ಬೊಮ್ಮಾಯಿ ಭರವಸೆ

ವಿಜಯ ಬಿರಾದಾರ (19) ಮೃತಪಟ್ಟ ಯುವಕ ಎಂದು ಗುರುತಿಸಲಾಗಿದೆ.

ಯುವಕ ವಿಜಯ ಬಿರಾದಾರ ಮತ್ತು ಆತನ ದೊಡ್ಡಪ್ಪ ವೆಂಕಣ್ಣ ಬಿರಾದಾರ ಜತೆಗೂಡಿ, ನದಿಗೆ ಹೆಚ್ಚಿನ ನೀರು ಹರಿದು ಬರುತ್ತಿರುವ ಹಿನ್ನೆಲೆಯಲ್ಲಿ ವಿದ್ಯುತ್ ಪಂಪಸೆಟ್ ಗೆ ಬಾಧಕವಾಗದಿರಲಿ ಎಂಬ ಕಾರಣದಿಂದ ತರಲು ಹೋಗಿದ್ದರು. ಈ ವೇಳೆ ನದಿಯಲ್ಲಿ ರಭಸವಾಗಿ ನೀರು ಹರಿಯುತ್ತಿದ್ದ ನದಿಯಲ್ಲಿ ಕೊಚ್ಚಿಕೊಂಡು ಹೋಗಿದ್ದಾನೆ.

ಮುಧೋಳದ ಅಗ್ನಿ ಶಾಮಕದ ದಳದ ಸಿಬ್ಬಂದಿ ಸುಮಾರು ಎರಡು ಗಂಟೆಗಳ ಶೋಧ ಕಾರ್ಯ ನಡೆಸಿ, ಮೃತ ದೇಹ ಹೊರ ತೆಗೆದಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next