Advertisement

ವಿಷ ಜಂತು ಕಡಿದು ಯುವಕ ಸಾವು

07:48 AM Nov 06, 2021 | Team Udayavani |

ಕಾಪು: ದೀಪಾವಳಿ ಪ್ರಯುಕ್ತ ತುಡರ ಹಬ್ಬದ ಬೆಳಕು ತೋರಿಸಲು ಗದ್ದೆಗೆ ಹೋಗಿದ್ದ ಯುವಕನಿಗೆ ವಿಷ ಜಂತು ಕಡಿದು ಮೃತಪಟ್ಟ ಘಟನೆ ಕಾಪುವಿನಲ್ಲಿ ಶುಕ್ರವಾರ ನಡೆದಿದೆ. ಕಾಪು ಕಲ್ಯ ನಿವಾಸಿ ರೋಹಿತ್ ಕುಮಾರ್ (26) ಮೃತ ಯುವಕ ಎಂದು ತಿಳಿದುಬಂದಿದೆ.

Advertisement

ಬಲೀಂದ್ರ ಪೂಜೆಯ ಪ್ರಯುಕ್ತ ಗುರುವಾರ ರಾತ್ರಿ ರೋಹಿತ್ ಕುಮಾರ್ ಮತ್ತು ಸಹೋದರರು ಗದ್ದೆಗೆ ತೆರಳಿದ್ದು, ಈ ಸಂದರ್ಭದಲ್ಲಿ ಅವರಿಗೆ ವಿಷ ಜಂತು ಕಡಿದಿತ್ತು. ಮನೆಯವರು ತತ್ ಕ್ಷಣ ಅವರನ್ನು ನಾಟಿ ವೈದ್ಯರ ಬಳಿಗೆ ಕರೆದೊಯ್ದು ಚಿಕಿತ್ಸೆ ಕೊಡಿಸಿದ್ದರು.

ಇದನ್ನೂ ಓದಿ:- ಜನಮನ್ನಣೆಗೆ ತಕ್ಕಂತೆ ಸರಕಾರದಿಂದ ಗೌರವ : ಅಪ್ಪು ನಿವಾಸದಲ್ಲಿ ಸಿಎಂ ಬೊಮ್ಮಾಯಿ

ಚಿಕಿತ್ಸೆಯಿಂದ ಚೇತರಿಸಿಕೊಂಡಿದ್ದ ಆತ, ಶುಕ್ರವಾರ ಸಂಜೆ ತೀವ್ರ ಅಸ್ವಸ್ಥಗೊಂಡಿದ್ದು ತಕ್ಷಣ ಮಣಿಪಾಲ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ, ಅಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿರುವುದಾಗಿ ವರದಿಯಾಗಿದೆ.

ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next