Advertisement

ಪ್ರವಾಹ; ಗುಜರಾತ್ ಜನರಿಗೆ ಆರ್ಥಿಕ ನೆರವು ನೀಡಿ; ಅಮಿರ್ ಖಾನ್ ಮನವಿ

04:51 PM Jul 29, 2017 | Team Udayavani |

ನವದೆಹಲಿ: ಪ್ರವಾಹದಿಂದ ದಿಕ್ಕೆಟ್ಟು ಹೋಗಿರುವ ಗುಜರಾತ್ ಮತ್ತು ಅಸ್ಸಾಂ ರಾಜ್ಯಗಳ ಜನರಿಗೆ ಆರ್ಥಿಕ ಸಹಾಯ ನೀಡುವಂತೆ ಬಾಲಿವುಡ್ ಖ್ಯಾತ ನಟ, ನಿರ್ಮಾಪಕ ಅಮಿರ್ ಖಾನ್ ಶನಿವಾರ ಸಾಮಾಜಿಕ ಜಾಲತಾಣದಲ್ಲಿನ ವಿಡಿಯೋದ ಮೂಲಕ ತಮ್ಮ ಅಭಿಮಾನಿಗಳಲ್ಲಿ ಮನವಿ ಮಾಡಿಕೊಂಡಿದ್ದಾರೆ.

Advertisement

ಗುಜರಾತ್ ಮತ್ತು ಅಸ್ಸಾಂ ರಾಜ್ಯದ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಆರ್ಥಿಕ ನೆರವು ನೀಡುವಂತೆ ಖಾನ್ ಅವರು ತಮ್ಮ ಅಭಿಮಾನಿಗಳಿಗೆ ಟ್ವೀಟರ್ ನ 40 ಸೆಕೆಂಡ್ಸ್ ವಿಡಿಯೋ ಮೂಲಕ ಮನವಿ ಮಾಡಿಕೊಂಡಿದ್ದಾರೆ. ಗುಜರಾತ್ ಮತ್ತು ಅಸ್ಸಾಂನಲ್ಲಿ ಸುರಿದ ಭಾರೀ ಮಳೆ ಮತ್ತು ಪ್ರವಾಹದಿಂದಾಗಿ ನೂರಾರು ಮಂದಿ ಸಾವಿಗೀಡಾಗಿದ್ದಾರೆ. ಪ್ರವಾಹದಿಂದಾಗಿ ಸಾವಿರಾರು ಮಂದಿ ಮನೆ ತೊರೆದಿದ್ದಾರೆ.

pic.twitter.com/UUAIJZPmzm

— Aamir Khan (@aamir_khan) July 29, 2017

Advertisement
Advertisement

Udayavani is now on Telegram. Click here to join our channel and stay updated with the latest news.

Next