Advertisement

“ಆನೆಬಲ’ಸೆನ್ಸಾರ್‌ ಪರೀಕ್ಷೆಯಲ್ಲಿ ಪಾಸ್‌; ರಿಲೀಸ್‌ಗೆ ರೆಡಿ

10:09 AM Dec 25, 2019 | Team Udayavani |

ಇತ್ತೀಚೆಗಷ್ಟೆ ಪೋಸ್ಟ್‌ ಪ್ರೊಡಕ್ಷನ್‌ ಕೆಲಸಗಳನ್ನು ಪೂರ್ಣಗೊಳಿಸಿ ಫ‌ಸ್ಟ್‌ಕಾಪಿಯೊಂದಿಗೆ ಹೊರಬಂದಿರುವ “ಆನೆಬಲ’ ಚಿತ್ರ ಜನವರಿ ತಿಂಗಳಿನಲ್ಲಿ ತೆರೆಗೆ ಬರುವ ಯೋಚನೆಯಲ್ಲಿದ್ದೆ. ಇತ್ತೀಚೆಗಷ್ಟೆ “ಆನೆಬಲ’ ಚಿತ್ರವನ್ನು ವೀಕ್ಷಿಸಿದ ಪ್ರಾದೇಶಿಕ ಸೆನ್ಸಾರ್‌ ಮಂಡಳಿ ಚಿತ್ರಕ್ಕೆ “ಯು/ಎ’ ಪ್ರಮಾಣ ಪತ್ರ ನೀಡಿ ಬಿಡುಗಡೆಗೆ ಅಸ್ತು ಎಂದಿದೆ.

Advertisement

“ಜನತಾ ಟಾಕೀಸ್‌’ ಬ್ಯಾನರ್‌ನಲ್ಲಿ ಎ.ವಿ.ವೇಣುಗೋಪಾಲ್‌ ಅಡಕಿಮಾರನಹಳ್ಳಿ ನಿರ್ಮಿಸಿರುವ ಈ ಚಿತ್ರದಲ್ಲಿ ನವ ಪ್ರತಿಭೆಗಳಾದ ಸಾಗರ್‌, ರಕ್ಷಿತಾ, ಮಲ್ಲರಾಜು, ಚಿರಂಜೀವಿ, ಹರೀಶ್‌, ಗೌತಮ್‌, ಮುತ್ತುರಾಜ್‌ ಮುಂತಾದವರು ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ.

ಸದ್ಯ ಚಿತ್ರದ ಪ್ರಮೋಶನ್‌ ಕೆಲಸಗಳಲ್ಲಿ ನಿರತವಾಗಿರುವ ಚಿತ್ರತಂಡ, ಕೆಲ ದಿನಗಳ ಹಿಂದಷ್ಟೆ ಚಿತ್ರದ ಹಾಡುಗಳನ್ನು ಹೊರತಂದಿದೆ. ಸೂನಗಹಳ್ಳಿ ರಾಜು ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ನಿರ್ದೇಶಿಸಿರುವ ಈ ಚಿತ್ರಕ್ಕೆ “ಲೂಸಿಯಾ” ಖ್ಯಾತಿಯ ಪೂರ್ಣಚಂದ್ರ ತೇಜಸ್ವಿ ಸಂಗೀತ ನೀಡಿದ್ದು, ಡಾ.ವಿ ನಾಗೇಂದ್ರ ಪ್ರಸಾದ್‌, ಯೋಗರಾಜ್‌ ಭಟ್‌ ಒಂದು ಹಾಡನ್ನು ಬರೆದಿದ್ದಾರೆ. ಜೆ.ಟಿ.ಬೆಟ್ಟೇಗೌಡ ಛಾಯಾಗ್ರಹಣ, ಕೆಂಪರಾಜು ಅವರ ಸಂಕಲನ ಈ ಚಿತ್ರಕ್ಕಿದೆ.

Advertisement

Udayavani is now on Telegram. Click here to join our channel and stay updated with the latest news.

Next