Advertisement

AAP ಬೇಡಿಕೆ: ನಿರ್ಗಮಿತ ಸಿಎಂ ಕೇಜ್ರಿವಾಲ್ ಅವರಿಗೆ ಸರಕಾರಿ ವಸತಿ ಕಲ್ಪಿಸಿ

06:59 PM Sep 20, 2024 | Team Udayavani |

ಹೊಸದಿಲ್ಲಿ: ನಿರ್ಗಮಿತ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ರಾಷ್ಟ್ರೀಯ ಪಕ್ಷವೊಂದರ ಸಂಚಾಲಕರಾಗಿರುವ ಕಾರಣ ಅವರಿಗೆ ಸರಕಾರಿ ವಸತಿ ಸೌಕರ್ಯ ಕಲ್ಪಿಸಬೇಕೆಂದು ಶುಕ್ರವಾರ(ಸೆ20) ಆಮ್ ಆದ್ಮಿ ಪಕ್ಷ ಒತ್ತಾಯಿಸಿದೆ.

Advertisement

ಪತ್ರಿಕಾಗೋಷ್ಠಿಯಲ್ಲಿ, ಎಎಪಿ ರಾಜ್ಯಸಭಾ ಸಂಸದ ರಾಘವ್ ಚಡ್ಡಾ, ”ಈ ಬಗ್ಗೆ ಪಕ್ಷವು ಸಂಬಂಧಿಸಿದ ಸಚಿವಾಲಯಕ್ಕೆ ಪತ್ರ ಬರೆಯಲಿದೆ.ಇದಕ್ಕಾಗಿ ನಾವು ಕಾನೂನು ಹೋರಾಟ ಮಾಡಬೇಕಾಗಿಲ್ಲ ಎಂದು ನಾನು ಭಾವಿಸುತ್ತೇನೆ. ತಮ್ಮ ನೈತಿಕತೆಗಾಗಿ ಕೇಜ್ರಿವಾಲ್ ರಾಜೀನಾಮೆ ನೀಡಲು ನಿರ್ಧರಿಸಿದ್ದಾರೆ. ತಮ್ಮ ಅಧಿಕೃತ ನಿವಾಸದಿಂದ ಹೊರಬರಲಿದ್ದಾರೆ, ”ಎಂದು ಹೇಳಿದರು.

ಕೇಜ್ರಿವಾಲ್ ಅವರಿಗೆ ಆಸ್ತಿ ಅಥವಾ ಸ್ವಂತ ಮನೆಯೂ ಇಲ್ಲ. ರಾಷ್ಟ್ರೀಯ ಪಕ್ಷವೊಂದರ ಸಂಚಾಲಕರಾಗಿರುವ ಅವರು ಸರಕಾರಿ ವಸತಿ ಪಡೆಯಲು ಅರ್ಹರಾಗಿದ್ದಾರೆ. ಕೇಂದ್ರ ಸರಕಾರವು ಅವರಿಗೆ ಅದನ್ನು ನೀಡಬೇಕು,” ಎಂದು ಚಡ್ಡಾ ಒತ್ತಾಯಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next