Advertisement

ಗುಜರಾತ್‌ನ ಕಾಂಗ್ರೆಸ್‌ ಮುಖಂಡ ಹಾರ್ದಿಕ್‌ ಪಟೇಲ್‌ ಅವರಿಗೆ ಆಪ್‌ ಆಹ್ವಾನ

10:29 PM Apr 15, 2022 | Team Udayavani |

ಅಹ್ಮದಾಬಾದ್‌: ಕಾಂಗ್ರೆಸ್‌ನಲ್ಲಿಯೇ ಇದ್ದು ಏಕೆ ದೂರುವಿರಿ? ನಮ್ಮಲ್ಲಿಗೆ ಬನ್ನಿ. ಹೀಗೊಂದು ಆಹ್ವಾನವನ್ನು ಗುಜರಾತ್‌ನ ಕಾಂಗ್ರೆಸ್‌ ಮುಖಂಡ ಹಾರ್ದಿಕ್‌ ಪಟೇಲ್‌ ಅವರಿಗೆ ಆಮ್‌ ಆದ್ಮಿ ಪಾರ್ಟಿ ಶುಕ್ರವಾರ ನೀಡಿದೆ.

Advertisement

ಈ ಬಗ್ಗೆ ಮಾತನಾಡಿದ ಆಮ್‌ ಆದ್ಮಿ ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಗೋಪಾಲ್‌ ಇಟಾಲಿಯಾ, ಹಾರ್ದಿಕ್‌ ಪಟೇಲ್‌ ಅವರಂಥ ಶಿಸ್ತುಬದ್ಧ ವ್ಯಕ್ತಿಗಳಿಗೆ ಕಾಂಗ್ರೆಸ್‌ನಲ್ಲಿ ಅವಕಾಶ ಇಲ್ಲ. ಹೀಗಾಗಿ, ಆ ಪಕ್ಷದಲ್ಲಿ ಇದ್ದುಕೊಂಡು ದೂರುವ ಬದಲು ನಮ್ಮಲ್ಲಿಗೆ ಬನ್ನಿ ಎಂದು ಆಹ್ವಾನಿಸಿದ್ದಾರೆ. ಅವರ ಕೊಡುಗೆ ನಮ್ಮ ಪಕ್ಷಕ್ಕೆ ಅಗತ್ಯವಾಗಿದೆ ಎಂದಿದ್ದಾರೆ.

ವರ್ಷಾಂತ್ಯಕ್ಕೆ ವಿಧಾನಸಭೆ ಚುನಾವಣೆ ನಡೆಯಲಿರುವ ಗುಜರಾತ್‌ನಲ್ಲಿ ಕಾಂಗ್ರೆಸ್‌ನ ಇತ್ತೀಚಿನ ಸಭೆಗೆ ಹಾರ್ದಿಕ್‌ ಅವರಿಗೆ ಆಹ್ವಾನ ಇರಲಿಲ್ಲ. ಹೀಗಾಗಿ, ಹಾರ್ದಿಕ್‌ ಪಕ್ಷದ ಮುಖಂಡರ ವಿರುದ್ಧ ಬಹಿರಂಗವಾಗಿಯೇ ಟೀಕಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next