Advertisement

ಚುನಾವಣಾ ರಣತಂತ್ರ ಹೂಡಲು ಕೇಜ್ರಿವಾಲ್ ನಾಳೆ ಗೋವಾಕ್ಕೆ ಆಗಮನ  

02:58 PM Jul 12, 2021 | Team Udayavani |

ಪಣಜಿ : ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ತಮ್ಮ ನೇತೃತ್ವದ ಆಮ್ ಆದ್ಮಿ ಪಕ್ಷದ ವ್ಯಾಪ್ತಿ ವಿಸ್ತರಣೆಗೆ ಸತತ ಪ್ರಯತ್ನ ಪಡುತ್ತಿದ್ದಾರೆ. ಬರುವ ವರ್ಷದಲ್ಲಿ ಚುನಾವಣೆಯನ್ನು ಎದುರಿಸುತ್ತಿರುವ ರಾಜ್ಯಗಳಲ್ಲಿ ತಮ್ಮ ಪಕ್ಷದ ಬಲವರ್ಧನೆಗೆ ಅವರು ತಂತ್ರ ಹೆಣೆಯುತ್ತಿದ್ದಾರೆ.

Advertisement

ಹೌದು,  ಆಮ್ ಆದ್ಮಿ ಪಕ್ಷದ ನಾಯಕ ಅರವಿಂದ ಕೇಜ್ರಿವಾಲ್ ನಾಳೆ (ಮಂಗಳವಾರ, ಜುಲೈ 13) ಗೋವಾಕ್ಕೆ ಆಗಮಿಸಲಿದ್ದಾರೆ.

ಇದನ್ನೂ ಓದಿ : ಎಲ್ ಐ ಸಿ ಯ ‘ಆಧಾರ್ ಶಿಲಾ’ ಉಳಿತಾಯ ಯೋಜನೆಯ ಬಗ್ಗೆ ನಿಮಗೆಷ್ಟು ಮಾಹಿತಿ ಇದೆ..?

ಬರುವ ವರ್ಷ, ಅಂದರೇ, 2022 ರ ಫೆಬ್ರವರಿಯಲ್ಲಿ ನಡೆಯಲಿರುವ ಗೋವಾ ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಗೋವಾದಲ್ಲಿ “ಲೆಟ್ಸ್ ಕ್ಲೀನ್ ಪಾಲಿಟಿಕ್ಸ” ಅಭಿಯಾನವನ್ನು ಆಮ್ ಆದ್ಮಿ ಪಕ್ಷ ಆರಂಭಿಸಿದೆ.

ಗೋವಾದಲ್ಲಿ ದೆಹಲಿ ಮುಖ್ಯಮಂತ್ರಿ ಕೇಜ್ರಿವಾಲ್  ಎರಡು ದಿನಗಳ ಕಾಲ ವಾಸ್ತವ್ಯ ಹೂಡಲಿದ್ದು, ಗೋವಾದಲ್ಲಿ ಪಕ್ಷದ ಬಲವರ್ಧನೆ, ಚುನಾವಣಾ ಪೂರ್ವ ಸಿದ್ಧತೆ ಸೇರಿದಂತೆ ರಾಜ್ಯ ಎಎಪಿ ನಾಯಕರು ಮತ್ತು ಕಾರ್ಯಕರ್ತರೊಂದಿಗೆ ಸಭೆ ನಡೆಸಿ ಚರ್ಚಿಸಲಿದ್ದಾರೆ ಎನ್ನಲಾಗಿದೆ.

Advertisement

ಇದನ್ನೂ ಓದಿ :  ಎರಡು ಮಕ್ಕಳ ಜನಸಂಖ್ಯಾ ನೀತಿ ಬಗ್ಗೆ ಸಿಎಂ ಜೊತೆ ಚರ್ಚೆ ಮಾಡ್ತೇವೆ : ಈಶ್ವರಪ್ಪ

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next