Advertisement

ದಿಲ್ಲಿಯಲ್ಲಿ ಕಾಂಗ್ರೆಸ್‌ ಜತೆ ಮೈತ್ರಿ ಮಾತುಕತೆ ನಡೆಯುತ್ತಿಲ್ಲ: ಆಪ್‌

11:52 AM Mar 11, 2019 | udayavani editorial |

ಹೊಸದಿಲ್ಲಿ :  ಮುಂಬರುವ ಲೋಕಸಭಾ ಚುನಾವಣೆಗೆ ಕಾಂಗ್ರೆಸ್‌ ಜತೆ ಮೈತ್ರಿ ಮಾಡಿಕೊಳ್ಳುವ ಯಾವುದೇ ಮಾತುಕತೆ ನಡೆಯುತ್ತಿಲ್ಲ; ಆದುದರಿಂದ ಆಮ್‌ ಆದ್ಮಿ ಪಕ್ಷ ದಿಲ್ಲಿಯ ಎಲ್ಲ ಏಳು ಲೋಕಸಭಾ ಸ್ಥಾನಗಳಿಗೆ ಸ್ಪರ್ಧಿಸಲಿದೆ ಎಂದು ಆಪ್‌ ನಾಯಕ ಗೋಪಾಲ್‌ ರಾಯ್‌ ಹೇಳಿದ್ದಾರೆ. 

Advertisement

ಆಪ್‌ ಮುಖ್ಯಸ್ಥ ಅರವಿಂದ ಕೇಜ್ರಿವಾಲ್‌ ಅವರಿಂದು ಪಕ್ಷದ ಎಲ್ಲ ಶಾಸಕರು ಮತ್ತು ಎಲ್ಲ ರಾಜ್ಯ ಘಟಕಗಳ ಮುಖ್ಯಸ್ಥರೊಂದಿಗೆ ಮಾತುಕತೆ ನಡಸಿ ಲೋಕಸಭಾ ಚುನಾವಣೆಗಳ ರಣತಂತ್ರವನ್ನು ಚರ್ಚಿಸಲಿದ್ದಾರೆ ಎಂದು ರಾಯ್‌ ಸುದ್ದಿಗಾರರಿಗೆ ಹೇಳಿದರು. 

ಕಳೆದ ವಾರ ದಿಲ್ಲಿ ಕಾಂಗ್ರೆಸ್‌ ಮುಖ್ಯಸ್ಥೆ ಶೀಲಾ ದೀಕ್ಷಿತ್‌ ಅವರು ದಿಲ್ಲಿಯಲ್ಲಿ ಆಪ್‌ ಜತೆಗೆ ಕಾಂಗ್ರೆಸ್‌ ಮೈತ್ರಿ ಮಾಡಿಕೊಳ್ಳುವುದಿಲ್ಲ; ಲೋಕಸಭಾ ಚುನಾವಣೆಗಳನ್ನು ದಿಲ್ಲಿಯಲ್ಲಿ ಕಾಂಗ್ರೆಸ್‌ ಏಕಾಂಗಿಯಾಗಿ ಹೋರಾಡಲಿದೆ ಎಂದು ಹೇಳಿದ್ದರು. 

Advertisement

Udayavani is now on Telegram. Click here to join our channel and stay updated with the latest news.

Next