Advertisement

ಬಿಜೆಪಿ ವಿರುದ್ಧ ಎಎಪಿ ಪ್ರತಿಭಟನೆ : ದೆಹಲಿಯಲ್ಲಿ ಟ್ರಾಫಿಕ್ ಜಾಮ್; ಜನಾಕ್ರೋಶ

05:09 PM Mar 14, 2022 | Team Udayavani |

ಹೊಸದಿಲ್ಲಿ: ಬಿಜೆಪಿ ವಿರುದ್ಧ ಆಮ್ ಆದ್ಮಿ ಪಕ್ಷದ (ಎಎಪಿ) ಪ್ರತಿಭಟನೆಯಿಂದಾಗಿ ಕೇಂದ್ರ ದೆಹಲಿಯ ಐಟಿಒ ಪ್ರದೇಶದಲ್ಲಿ ಸೋಮವಾರ ಟ್ರಾಫಿಕ್ ಜಾಮ್ ಉಂಟಾಯಿತು.

Advertisement

ರಾಷ್ಟ್ರ ರಾಜಧಾನಿಯಲ್ಲಿ ಮುನ್ಸಿಪಲ್ ಚುನಾವಣೆಯನ್ನು “ಮುಂದೂಡುವಂತೆ” ರಾಜ್ಯ ಚುನಾವಣಾ ಆಯೋಗವನ್ನು ಒತ್ತಾಯಿಸಿದ ಆರೋಪದ ಮೇಲೆ ಎಎಪಿ ಬಿಜೆಪಿ ವಿರುದ್ಧ ಪ್ರತಿಭಟನೆ ನಡೆಸಿದೆ. ಎಎಪಿ ಕಾರ್ಯಕರ್ತರು ಮತ್ತು ಮುಖಂಡರು ತಮ್ಮ ಪಕ್ಷದ ಕಚೇರಿ ಬಳಿ ಪ್ರತಿಭಟನೆ ನಡೆಸಿ, ಚುನಾವಣೆಯ ದಿನಾಂಕವನ್ನು ಘೋಷಿಸುವಂತೆ ಒತ್ತಾಯಿಸಿದ್ದಾರೆ.

ನೂರಾರು ಪ್ರಯಾಣಿಕರು ತೊಂದರೆ ಅನುಭವಿಸಿದ್ದು,ಐಟಿಒದಲ್ಲಿ ಟ್ರಾಫಿಕ್ ಪರಿಸ್ಥಿತಿಯ ಬಗ್ಗೆ ತಿಳಿಸಲು ಜನರು ತಮ್ಮ ನೋವನ್ನು ಟ್ವಿಟರ್‌ನಲ್ಲಿ ಹಂಚಿಕೊಂಡಿದ್ದಾರೆ.

ಆದಾಯ ತೆರಿಗೆ ಇಲಾಖೆಯಲ್ಲಿ ಕೆಲಸ ಮಾಡುತ್ತಿರುವ ಮೋಹಿತ್ ತೋಮರ್ ಅವರು ಐಟಿಒದಿಂದ ಸಿವಿಕ್ ಸೆಂಟರ್ ತಲುಪಲು ಒಂದು ಗಂಟೆ ತೆಗೆದುಕೊಂಡರು ಎಂದು ಹೇಳಿಕೊಂಡಿದ್ದು, ಸಾಮಾನ್ಯವಾಗಿ ಸಿವಿಕ್ ಸೆಂಟರ್‌ನಲ್ಲಿರುವ ನನ್ನ ಕಛೇರಿಯನ್ನು ತಲುಪಲು ಕೇವಲ 10 ನಿಮಿಷಗಳನ್ನು ತೆಗೆದುಕೊಳ್ಳುತ್ತದೆ. ಭಾರೀ ಟ್ರಾಫಿಕ್‌ನಿಂದಾಗಿ ನಾನು ಸಿಲುಕಿಕೊಂಡೆ ಮತ್ತು ನನ್ನ ಕಚೇರಿಯನ್ನು ಒಂದು ಗಂಟೆ ತಡವಾಗಿ ತಲುಪಿದೆ” ಎಂದುಹೇಳಿದ್ದಾರೆ.

Advertisement

ಲಕ್ಷ್ಮಿ ನಗರದಿಂದ ಐಟಿಒಗೆ ಹೋಗುವ ರಸ್ತೆಯಲ್ಲಿ ವಾಹನಗಳು ಮಂದಗತಿಯಲ್ಲಿ ಸಾಗಿದವು ಎಂದು ಪ್ರಯಾಣಿಕರೊಬ್ಬರು ಹೇಳಿದರು.

ಬಿಜೆಪಿ ಪ್ರಧಾನ ಕಚೇರಿಯನ್ನು ಮುತ್ತಿಗೆ ಹಾಕಲು ಪಕ್ಷವು ಯೋಜಿಸಿತ್ತು ಆದರೆ ಪ್ರತಿಭಟನಾಕಾರರು ಅಲ್ಲಿಗೆ ತಲುಪಲು ಸಾಧ್ಯವಾಗದಂತೆ ಪೊಲೀಸರು ರಸ್ತೆಯನ್ನು ಬ್ಯಾರಿಕೇಡ್ ಗಳನ್ನು ಹಾಕಿ ತಡೆದಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next