Advertisement

AAP ‘ಮಹಾರ್‍ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್

07:21 PM Mar 29, 2024 | Team Udayavani |

ಹೊಸದಿಲ್ಲಿ: ರಾಮಲೀಲಾ ಮೈದಾನದಲ್ಲಿ ಮಾರ್ಚ್ 31 ರಂದು ನಡೆಯಲಿರುವ ಆಮ್ ಆದ್ಮಿ ಪಕ್ಷದ ‘ಮಹಾರ್‍ಯಾಲಿ’ಯಲ್ಲಿ ಇಂಡಿಯಾ ಮೈತ್ರಿಕೂಟದ ಪ್ರಮುಖ ನಾಯಕರಾದ ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ, ಶರದ್ ಪವಾರ್, ಉದ್ಧವ್ ಠಾಕ್ರೆ, ಅಖಿಲೇಶ್ ಯಾದವ್, ತೇಜಸ್ವಿ ಯಾದವ್ ಸೇರಿ ಪ್ರಮುಖರು ಪಾಲ್ಗೊಳ್ಳಲಿದ್ದಾರೆ ಎಂದು ಪಕ್ಷದ ಹಿರಿಯ ನಾಯಕ ಗೋಪಾಲ್ ರಾಯ್ ಶುಕ್ರವಾರ ತಿಳಿಸಿದ್ದಾರೆ.

Advertisement

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಬಂಧನವನ್ನು ಖಂಡಿಸಿ ಭಾನುವಾರ ರಾಮಲೀಲಾ ಮೈದಾನದಲ್ಲಿ 20,000 ಕ್ಕೂ ಹೆಚ್ಚು ಜನರು ಸೇರಿ ರ್‍ಯಾಲಿಯನ್ನು ನಡೆಸಲು ಆಮ್ ಆದ್ಮಿ ಪಕ್ಷ ಸಂಬಂಧಿಸಿದ ಅಧಿಕಾರಿಗಳ ಅನುಮತಿಯನ್ನು ಪಡೆದಿದೆ ಎಂದು ಹೇಳಿದರು.

ಅರವಿಂದ್ ಕೇಜ್ರಿವಾಲ್ ಅವರ ಪತ್ನಿ ಸುನಿತಾ ಕೇಜ್ರಿವಾಲ್ ಅವರು ‘ಮಹಾರ್‍ಯಾಲಿ’ ಉದ್ದೇಶಿಸಿ ಮಾತನಾಡುತ್ತಾರೆಯೇ ಎಂಬ ನಿರ್ಧಾರವನ್ನು ನಂತರ ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದರು.

ಡೆರೆಕ್ ಒ’ಬ್ರಿಯಾನ್, ತ್ರಿಚಿ ಶಿವಾ, ಫಾರೂಕ್ ಅಬ್ದುಲ್ಲಾ ಮತ್ತು ಜಾರ್ಖಂಡ್ ಮುಖ್ಯಮಂತ್ರಿ ಚಂಪೈ ಸೊರೆನ್, ಪ್ರಸ್ತುತ ಜೈಲಿನಲ್ಲಿರುವ ಜಾರ್ಖಂಡ್ ಮಾಜಿ ಮುಖ್ಯಮಂತ್ರಿ ಹೇಮಂತ್ ಸೊರೆನ್ ಅವರ ಪತ್ನಿ ಕಲ್ಪನಾ ಸೊರೆನ್ ಕೂಡ ಪಾಲ್ಗೊಳ್ಳಲಿದ್ದಾರೆ ಎಂದು ರಾಯ್ ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next