Advertisement

ಗೋವಾದಲ್ಲಿ ಬಿಜೆಪಿ ಸೋಲಿಸಲು ಕಾಂಗ್ರೆಸ್ ನಿಂದ ಮಾತ್ರ ಸಾಧ್ಯ: ಪಿ.ಚಿದಂಬರಂ

05:31 PM Oct 25, 2021 | Team Udayavani |

ಪಣಜಿ: ಗೋವಾ ವಿಧಾನಸಭಾ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷ ಹಾಗೂ ತೃಣಮೂಲ ಕಾಂಗ್ರೆಸ್ ಪಕ್ಷ ಈ ಎರಡೂ ಪಕ್ಷಗಳು ಕೇವಲ ಹೆಸರಿಗೊಂದೇ ಸ್ಫಧಿಗಳಾಗಿದ್ದಾರೆ. ಬಿಜೆಪಿಯನ್ನು ಪರಾಭವಗೊಳಿಸಲು ಹಾಗೂ ವಮುಂದಿನ ಸರ್ಕಾರವನ್ನು ಸ್ಥಾಪಿಸಲು ಕಾಂಗ್ರೆಸ್  ಪಕ್ಷವು ಸರ್ವೋತ್ತಮ ಸ್ಥಿತಿಯಲ್ಲಿದೆ ಎಂದು ಗೋವಾ ವಿಧಾನಸಭಾ ಚುನಾವಣೆಯ ಕಾಂಗ್ರೆಸ್ ಪಕ್ಷದ ನಿರೀಕ್ಷಕ ಪಿ.ಚಿದಂಬರಂ ಅಭಿಪ್ರಾಯಪಟ್ಟರು.

Advertisement

ಸ್ಥಳೀಯ ಸುದ್ಧಿವಾಹಿನಿಯೊಂದಿಗೆ ಮಾತನಾಡಿದ ಅವರು,ತೃಣಮೂಲ ಕಾಂಗ್ರೆಸ್ ಪಕ್ಷವು ಪಶ್ಚಿಮ ಬಂಗಾಳದ ಪಕ್ಷವಾಗಿದೆ. ಮಮತಾ ಬ್ಯಾನರ್ಜಿಯವರು ಗೋವಾದಲ್ಲಿ ಇತರ ಪಕ್ಷದ ನಾಯಕರನ್ನು ತಮ್ಮ ಪಕ್ಷಕ್ಕೆ ಸೇರಿಸಿಕೊಂಡು ಗೋವಾದಲ್ಲಿ ತನ್ನ ಶಕ್ತಿಯನ್ನು ಹೆಚ್ಚಿಸಿಕೊಳ್ಳುವ ಪ್ರಯತ್ನ ನಡೆಸುತ್ತಿದೆ ಎಂದು ಪಿ.ಚಿದಂಬರಂ ನುಡಿದರು.

ಗೋವಾದಲ್ಲಿ ಮುಂದಿನ ವರ್ಷ ವಿಧಾನಸಭಾ ಚುನಾವಣೆ ನಡೆಯಲಿದೆ. ಅಂತೆಯೇ ಒಟ್ಟೂ 5 ರಾಜ್ಯಗಳಲ್ಲಿ ಚುನಾವಣೆ ನಡೆಯಲಿದೆ. ಇತರ ರಾಜ್ಯಗಳು ಕೂಡ ಅಷ್ಟೇ ಮಹತ್ವದ್ದಾಗಿದೆ. ಗೋವಾ ರಾಜ್ಯವು ಈ ದೃಷ್ಟಿಯಲ್ಲಿ ಅತ್ಯಂತ ಮಹತ್ವದ್ದಾಗಿದೆ ಪಿ.ಚಿದಂಬರಂ ಅಭಿಪ್ರಾಯಪಟ್ಟರು.

Advertisement

Udayavani is now on Telegram. Click here to join our channel and stay updated with the latest news.

Next