Advertisement

ತಲ್ವಾರ್‌ ದಂಪತಿ ಖುಲಾಸೆ ಪ್ರಶ್ನಿಸಿ ಸುಪ್ರೀಂಗೆ ಅರ್ಜಿ?

07:00 AM Oct 21, 2017 | Team Udayavani |

ನವದೆಹಲಿ: ಆರುಷಿ-ಹೇಮರಾಜ್‌ ಹತ್ಯೆ ಪ್ರಕರಣದಲ್ಲಿ ಆರುಷಿ ಹೆತ್ತವರಾದ ರಾಜೇಶ್‌ ಹಾಗೂ ನೂಪುರ್‌ ತಲ್ವಾರ್‌ ದಂಪತಿಯನ್ನು ಖುಲಾಸೆಗೊಳಿಸಿರುವ ಹೈಕೋರ್ಟ್‌ ನಿರ್ಧಾರವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಲು ಹೇಮರಾಜ್‌ ಕುಟುಂಬ ನಿರ್ಧರಿಸಿದೆ ಎಂದು ಮೂಲಗಳು ತಿಳಿಸಿವೆ. 

Advertisement

ಈ ಪ್ರಕರಣದ ತನಿಖೆ ನಡೆಸಿದ್ದ ಸಿಬಿಐ ಕೂಡಾ ತಲ್ವಾರ್‌ ದಂಪತಿ ವಿರುದ್ಧ ಸೂಕ್ತ ಸಾಕ್ಷ್ಯಾಧಾರ ನೀಡುವಲ್ಲಿ ವಿಫ‌ಲವಾದ ಹಿನ್ನೆಲೆಯಲ್ಲಿ, ಕಳೆದ ವಾರ ಹೈಕೋರ್ಟ್‌ ತಲ್ವಾರ್‌ ದಂಪತಿಯನ್ನು ದೋಷಮುಕ್ತಗೊಳಿಸಿತ್ತು. ಈ ತೀರ್ಪಿನ ವಿರುದ್ಧ ಅಸಮಾಧಾನಗೊಂಡಿರುವ ಹೇಮರಾಜ್‌ ಕುಟುಂಬ ತೀರ್ಪಿನ ವಿರುದ್ಧ ಮೇಲ್ಮನವಿ ಸಲ್ಲಿಸುವ ನಿರ್ಧಾರಕ್ಕೆ ಬಂದಿದ್ದಾರೆ ಎಂದು ಹೇಳಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next