Advertisement

Uttarakhand; ಹಲ್ದ್ವಾನಿ ಹಿಂಸಾಚಾರದ ಮಾಸ್ಟರ್ ಮೈಂಡ್ ಅಬ್ದುಲ್ ಮಲಿಕ್ ಬಂಧನ

07:10 PM Feb 24, 2024 | Team Udayavani |

ಹೊಸದಿಲ್ಲಿ: ಉತ್ತರಾಖಂಡದ ಹಲ್ದ್ವಾನಿಯಲ್ಲಿ ನಡೆದ ಹಿಂಸಾಚಾರದ ಹಿಂದಿನ ಮಾಸ್ಟರ್ ಮೈಂಡ್ ಅಬ್ದುಲ್ ಮಲಿಕ್ ನನ್ನು ದೆಹಲಿಯಲ್ಲಿ ಬಂಧಿಸಲಾಗಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.

Advertisement

ಬಂಭೂಲ್‌ಪುರ ಪ್ರದೇಶದಲ್ಲಿ ಅಕ್ರಮವಾಗಿ ನಿರ್ಮಿಸಲಾಗಿದ್ದ ಮದರಸಾವನ್ನು ಕೆಡವಲು ಆರಂಭಿಸಿದ ಬಳಿಕ ಹಲ್ದ್ವಾನಿಯಲ್ಲಿ ಭಾರೀ ಹಿಂಸಾಚಾರ ನಡೆದಿತ್ತು. ಸ್ಥಳೀಯರು ಈ ಕ್ರಮವನ್ನು ವಿರೋಧಿಸಿದ ಬಳಿಕ ಕಲ್ಲು ತೂರಾಟ ನಡೆದು ಹಿಂಸಾತ್ಮಕ ಘರ್ಷಣೆಯಲ್ಲಿ ಆರು ಜನರು ಸಾವನ್ನಪ್ಪಿದ್ದರು. ಪೊಲೀಸ್ ಸಿಬಂದಿ, ಮಾಧ್ಯಮ ಪ್ರತಿನಿಧಿಗಳು ಸೇರಿದಂತೆ ನೂರಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಪೊಲೀಸರ ಪ್ರಕಾರ, ಅಬ್ದುಲ್ ಮಲಿಕ್ ಮದರಸಾವನ್ನು ನಿರ್ಮಿಸಿದ್ದು, ಅದನ್ನು ಕೆಡಹುವುದನ್ನು ತೀವ್ರವಾಗಿ ವಿರೋಧಿಸಿದ್ದ. ಮುನ್ಸಿಪಲ್ ಕಾರ್ಪೊರೇಷನ್‌ನ ಕೆಡವಲು ನೋಟಿಸ್‌ ಪ್ರಶ್ನಿಸಿ ಆತನ ಪತ್ನಿಯೂ ನ್ಯಾಯಾಲಯದ ಮೆಟ್ಟಿಲೇರಿದ್ದರು. ಮಲಿಕ್ ಮತ್ತು ಪುತ್ರ ಅಬ್ದುಲ್ ಮೊಯಿದ್ ವಿರುದ್ಧ ಲುಕ್ ಔಟ್ ನೋಟಿಸ್ಜಾ ಕೂಡ ಜಾರಿ ಮಾಡಲಾಗಿತ್ತು.

Advertisement

Udayavani is now on Telegram. Click here to join our channel and stay updated with the latest news.

Next