Advertisement

ರಾಜಕೀಯ ಎಂಟ್ರಿ ಸುಳಿವು ನೀಡಿದ ಜ್ಯೂ.ರೆಬೆಲ್ ಸ್ಟಾರ್ ಅಭಿಷೇಕ್

02:08 PM Jul 30, 2021 | Team Udayavani |

ಬೆಂಗಳೂರು : ರಾಜಕೀಯಕ್ಕೂ ನನಗೂ ಆಗಿ ಬರೋಲ್ಲ ಎನ್ನುತ್ತಿದ್ದ ದಿವಂಗತ ನಟ ಅಂಬರೀಶ್ ಅವರ ಪುತ್ರ ಅಭಿಷೇಕ್ ರಾಜಕೀಯಕ್ಕೆ ಎಂಟ್ರಿ ಕೊಡುವ ಬಗ್ಗೆ ಸುಳಿವು ನೀಡಿದ್ದಾರೆ.

Advertisement

ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಹುಳುಗನ ಹಳ್ಳಿಗೆ ಭೇಟಿ ನೀಡಿದ್ದ ವೇಳೆ ಮಾತನಾಡಿರುವ ಅಭಿಷೇಕ್, ”ಜನರು ಬಯಸಿದರೆ ಚುನಾವಣೆಯಲ್ಲಿ ಸ್ಪರ್ಧೆ ಮಾಡಲು ನಾನು ಸಿದ್ಧ” ಎಂದಿದ್ದಾರೆ.

ಭವಿಷ್ಯದಲ್ಲಿ ಏನೇನೂ ಬದಲಾವಣೆಗಳು ಆಗುತ್ತೋ ಯಾರಿಗೂ ಗೊತ್ತು. ಕಳೆದ ವಾರ ಸಿಎಂ ಬದಲಾಗ್ತಾರೆ ಅಂತ ಯಾರಿಗಾದ್ರೂ ಗೊತ್ತಿತ್ತಾ? ಹಾಗಾಗಿ, ಭವಿಷ್ಯ ಏನು ಅಂತ ಈಗಲೇ ಹೇಳೋಕೆ ಸಾಧ್ಯನಾ? ಜನ ಬಯಸಿದರೆ ನಾನು ಬರ್ತೀನಿ. ಮಂಡ್ಯಗಾಗಲಿ ಮದ್ದೂರಿಗಾಗಲಿ ಏಳು ಕ್ಷೇತ್ರಗಳಿಗೂ ಒಳ್ಳೆಯ ಶಾಸಕರು ಸಿಗಬೇಕು. ಒಳ್ಳೆಯ ಪ್ರತಿನಿಧಿಗಳು ಸಿಗಬೇಕು” ಎಂದು ಹೇಳಿರುವ ಅಭಿಷೇಕ್ ಮಂಡ್ಯ ಜನರಲ್ಲಿ ಕುತೂಹಲ ಹೆಚ್ಚಿಸಿದ್ದಾರೆ.

ಇನ್ನು ಈ ಹಿಂದೆ ರಾಜಕೀಯ ಪ್ರವೇಶದ ಕುರಿತು ಪ್ರಶ್ನಿಸಿದಾಗ ನನಗೆ ರಾಜಕೀಯ ಆಸಕ್ತಿ ಇಲ್ಲ, ಸಿನಿಮಾಗಳನ್ನು ಮಾಡುತ್ತೇನೆ ಎಂದು ಹೇಳುತ್ತಿದ್ದ ಅಭಿಷೇಕ್‌ಗೆ ರಾಜಕೀಯದ ಮೇಲೆ ಆಸಕ್ತಿ ಮೂಡಿದೆ ಎನ್ನಲಾಗಿದೆ.

ಇನ್ನು ಅಭಿಷೇಕ್ ಸದ್ಯ ಅವರ ಎರಡನೇ ಚಿತ್ರ ‘ಬ್ಯಾಡ್ ಮ್ಯಾನರ್ಸ್’ ಆರಂಭಿಸಿದ್ದಾರೆ. ದುನಿಯಾ ಸೂರಿ ನಿರ್ದೇಶನದಲ್ಲಿ ತಯಾರಾಗುತ್ತಿರುವ ಈ ಚಿತ್ರದಲ್ಲಿ ರಚಿತಾ ರಾಮ್ ಸಹ ನಟಿಸುತ್ತಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next