Advertisement

ಮಹಾರಾಷ್ಟ್ರದಲ್ಲಿ ಶೇ.50 ಕೈದಿಗಳ ಬಿಡುಗಡೆ

02:46 AM May 16, 2020 | Team Udayavani |

ದೇಶದಲ್ಲೇ ಅತಿ ಹೆಚ್ಚು ಕೋವಿಡ್ ಬಾಧಿತವಾಗಿರುವ ಮಹಾರಾಷ್ಟ್ರದಲ್ಲಿ ಶೇ.50ರಷ್ಟು ಕೈದಿಗಳನ್ನು ತಾತ್ಕಾಲಿಕ ಜಾಮೀನಿನ ಮೇರೆಗೆ ಬಿಡುಗಡೆ ಮಾಡಲು ನಿರ್ಧರಿಸಲಾಗಿದೆ.

Advertisement

ಸುಪ್ರೀಂ ಕೋರ್ಟ್‌ ರಚಿಸಿದ್ದ ನ್ಯಾಯಮೂರ್ತಿಗಳ ನೇತೃತ್ವದ ಉನ್ನತ ಮಟ್ಟದ ಸಮಿತಿಯು, ರಾಜ್ಯಾದ್ಯಂತ ಜೈಲುಗಳಲ್ಲಿರುವ ಕೈದಿಗಳ ಪೈಕಿ ಶೇ.50ರಷ್ಟು ಮಂದಿಯನ್ನು ಬಿಡುಗಡೆ ಮಾಡಲು ತೀರ್ಮಾನ ಕೈಗೊಂಡಿದೆ.

ಆದರೆ, ತಾತ್ಕಾಲಿಕ ಜಾಮೀನಿನ ಅವಧಿಯನ್ನು ನಿರ್ಧರಿಸಿಲ್ಲ. ಹೊಸ ಮಾರ್ಗಸೂಚಿ ಪ್ರಕಾರ, ಕೆಲ ಕಾಯ್ದೆಯಡಿ ಪ್ರಕರಣಗಳಲ್ಲಿ ಭಾಗಿಯಾಗಿರುವ ಕೈದಿಗಳಿಗೆ ಈ ವಿನಾಯಿತಿ ಸಿಗುವುದಿಲ್ಲ.

ಇತ್ತೀಚೆಗೆ ಮಧ್ಯ ಮುಂಬೈನ ಆರ್ತೂರ್‌ ಜೈಲಿನಲ್ಲಿರುವ 100ಕ್ಕೂ ಅಧಿಕ ಸಿಬ್ಬಂದಿ ಹಾಗೂ ಕೈದಿಗಳಿಗೆ ಕೋವಿಡ್ ಪಾಸಿಟಿವ್‌ ಇರುವುದು ಕಂಡು ಬಂದಿತ್ತು. ಈ ಹಿನ್ನೆಲೆಯಲ್ಲಿ ಕೈದಿಗಳನ್ನು ಬಿಡುಗಡೆ ಮಾಡಲಾಗುತ್ತಿದೆ.

Advertisement

Udayavani is now on Telegram. Click here to join our channel and stay updated with the latest news.

Next