Advertisement

Mangaluru ತಲೆಮರೆಸಿಕೊಂಡಿದ್ದ ಆರೋಪಿ ಬಂಧನ; ಬಿಡುಗಡೆ

12:16 AM Dec 28, 2023 | Team Udayavani |

ಮಂಗಳೂರು: ಪ್ರಕರಣವೊಂದಕ್ಕೆ ಸಂಬಂಧಿಸಿ 8 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿ ಕೊಂಡಿದ್ದ ಆರೋಪಿ, ಮಂಗಳೂರು ಸೆಂಟ್ರಲ್‌ ಮಾರ್ಕೆಟ್‌ ನಲ್ಲಿ ತರಕಾರಿ ವ್ಯಾಪಾರ ಮಾಡುತ್ತಿದ್ದ ತೊಕ್ಕೊಟ್ಟು ಕಾಪಿಕಾಡು ನಿವಾಸಿ ಸಂತೋಷನನ್ನು ಧರ್ಮಸ್ಥಳ ಪೊಲೀಸರು ಬಂಧಿಸಿದ್ದಾರೆ.

Advertisement

ಆತನನ್ನು ಮಂಗಳೂರಿನ 5ನೇ ಜೆಎಂಎಫ್ಸಿ ನ್ಯಾಯಾಲಯದ ಹಾಜರು ಪಡಿಸಲಾಗಿದ್ದು, ಜಾಮೀನಿನಲ್ಲಿ ಬಿಡುಗಡೆ ಮಾಡಲಾಗಿದೆ. ಸಂತೋಷನು ಬೆಳ್ತಂಗಡಿ ತಾಲೂಕಿನ ಛಿಬಿದ್ರೆಗೆ ಬಂದಿರುವ ಮಾಹಿತಿಯಂತೆ ಬೆಳ್ತಂಗಡಿ ಪೊಲೀಸ್‌ ವೃತ್ತ ನಿರೀಕ್ಷಕ ನಾಗೇಶ್‌ ಕದ್ರಿ ಮತ್ತು ಧರ್ಮಸ್ಥಳ ಠಾಣೆಯ ಉಪನಿರೀಕ್ಷಕ ಅನಿಲ್‌ ಕುಮಾರ್‌ ಡಿ. ಮಾರ್ಗದರ್ಶನದಂತೆ ಡಿ.22ರಂದು ಸಂಜೆ 5.45ಕ್ಕೆ ಧರ್ಮಸ್ಥಳ ಠಾಣೆ ಎಚ್‌ಸಿ ರಾಜೇಶ್‌ ಎನ್‌., ಪಿಸಿಗಳಾದ ಗೋವಿಂದರಾಜ್‌, ಯೋಗೀಶ್‌ ಅವರು ಚಿಭಿದ್ರೆ ಬಸ್‌ ನಿಲ್ದಾಣದ ಬಳಿ ಬಂಧಿಸಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next