Advertisement

ಚುನಾವಣೆ ಕರ್ತವ್ಯಕ್ಕೆ ಗೈರು: ಇಬ್ಬರು ಸಸ್ಪೆಂಡ್‌

10:03 PM Mar 19, 2023 | Team Udayavani |

ಬೀದರ: ಚುನಾವಣೆ ಕರ್ತವ್ಯದಲ್ಲಿ ನಿರ್ಲಕ್ಷ್ಯ ಆರೋಪ ಹಿನ್ನೆಲೆ ಇಬ್ಬರು ಅಧಿಕಾರಿಗಳನ್ನು ಅಮಾನತುಗೊಳಿಸಿ ಜಿಲ್ಲಾ ಚುನಾವಣಾಧಿಕಾರಿಗಳಾದ ಜಿಲ್ಲಾಧಿಕಾರಿ ಗೋವಿಂದ ರೆಡ್ಡಿ ಆದೇಶ ಹೊರಡಿಸಿದ್ದಾರೆ.

Advertisement

ಔರಾದ ತಾಲೂಕಿನಲ್ಲಿ ಚುನಾವಣೆ ಕಾರ್ಯ ನಿರ್ವಹಣೆ ಹಾಗೂ ತರಬೇತಿ ಕೈಗೊಂಡಿದ್ದು, ಈ ಬಗ್ಗೆ ಔರಾದ ಪಂಚಾಯತ್‌ ರಾಜ್‌ ಉಪ ವಿಭಾಗದ ಎಫ್‌ಡಿಎ ವಿಠಲರಾವ್‌ ಮತ್ತು ಸಹಾಯಕ ತೋಟಗಾರಿಕೆ ಅಧಿಕಾರಿ ರಾಜಕುಮಾರ ಅವರಿಗೆ ಮುಂಚಿತವಾಗಿ ತಿಳಿಸಿದರೂ ಯಾವುದೇ ಮುನ್ಸೂಚನೆ ನೀಡದೆ, ಮೇಲಾಧಿಕಾರಿಗಳ ಅನುಮತಿ ಪಡೆಯದೆ ತರಬೇತಿಗೆ ಗೈರಾಗಿದ್ದಾರೆ.

ಆ ಮೂಲಕ ಚುನಾವಣೆ ಕಾರ್ಯದಲ್ಲಿ ತೊಡಕುಂಟು ಮಾಡಿದ್ದಾರೆ. ಈ ಪ್ರಯುಕ್ತ ಇಬ್ಬರು ಅಧಿಕಾರಿಗಳನ್ನು ಇಲಾಖೆ ವಿಚಾರಣೆ ಕಾಯ್ದಿರಿಸಿ ತಕ್ಷಣದಿಂದಲೇ ಜಾರಿಗೆ ಬರುವಂತೆ ಅಮಾನತುಗೊಳಿಸಿ ಆದೇಶಿಸಿದ್ದಾರೆ.

ಜಿಲ್ಲಾಧಿಕಾರಿಗಳ ಅನುಮತಿ ಇಲ್ಲದೇ ಕೇಂದ್ರ ಸ್ಥಾನ ಬಿಡತಕ್ಕದ್ದಲ್ಲ ಹಾಗೂ ನಿಯಮಾನುಸಾರ ಜೀವನಾಂಶ ಭತ್ಯೆ ಪಡೆಯಲು ಅರ್ಹರಾಗಿರುತ್ತಾರೆ ಎಂದು ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next