Advertisement
ನಗರದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಪಕ್ಷದಿಂದ ಕಾರಣ ಕೇಳಿ ನನಗೆ ಯಾವುದೇ ನೋಟೀಸ್ ಬರದಿದ್ದರೂ ಊಹಾಪೋಹ ಹರಡಿಕೊಂಡಿವೆ. ಮಾಧ್ಯಮಗಳಲ್ಲಿ ನನ್ನ ಬಗ್ಗೆ ಸಲ್ಲದ ವರದಿಗಳು ಪ್ರಸಾರ ಆಗುತ್ತಿವೆ ಎಂದರು.
Related Articles
Advertisement
ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಬಳಿ ಇನ್ನಷ್ಟು ಸಿಡಿ ಗಳಿವೆ. ರಾಜಕಾರಣಿ, ಉನ್ನತ ಮಟ್ಟದ ಅಧಿಕಾರಿಗಳನ್ನು ಬ್ಲಾಕ್ಮೇಲ್ ಮಾಡುವುಕ್ಕಾಗಿ ಇಂಥ ಕೃತ್ಯದಲ್ಲಿ ತೊಡಗಿರುವ ಗುಂಪು ಬೆಂಗಳೂರಿನಲ್ಲಿದೆ ಎಂದರು.
ಬೆಂಗಳೂರಿನಲ್ಲಿ ಈ ಕೃತ್ಯದಲ್ಲಿ ಸಕ್ರೀಯವಾಗಿರುವ ಗುಂಪು ಬ್ಲಾಕ್ಮೇಲ್ ದಂಧೆ ಮಾಡುವುದಕ್ಕಾಗಿ ಇಂಥ ಕೃತ್ಯದಲ್ಲಿ ತೊಡಗಿದೆ. ಹೀಗಾಗಿ ರಮೇಶ ಜಾರಕಿಹೊಳಿ ಹೇಳಿದಂತೆ ಸಿಬಿಐ ತನಿಖೆ ನಡೆಸದರೆ ಇದರ ಹಿಂದೆ ಯಾವ ರಾಜಕಾರಣಿ ಇದ್ದಾನೆ, ಯವ ಪಕ್ಷದವರಿದ್ದಾರೆ ಎಂಬುದರ ಎಲ್ಲ ಬಣ್ಣ ಬಯಲಾಗುತ್ತದೆ ಎಂದರು.
ಹತಾಷ ಸ್ಥಿತಿಯಲ್ಲಿರುವ ಜೆಡಿಎಸ್ ನಾಯಕ ಎಚ್.ಡಿ.ಕುಮಾರಸ್ವಾಮಿ ಪಂಚರತ್ನ ಯಾತ್ರೆಯಲ್ಲಿ ನನ್ನ ಬಗ್ಗೆ ಮಾತನಾಡಿದ್ದಾರೆ. ಉತ್ತರ ಕರ್ನಾಟಕದಲ್ಲಿ ತಮ್ಮ ಪಕ್ಷ ಹಾಗೂ ತಮ್ಮಿಂದ ಏನೂ ಮಾಡಲಾಗದ ಸ್ಥಿತಿ ತಲುಪಿದ್ದಾರೆ ಎಂದು ವ್ಯಂಗ್ಯವಾಡಿದರು.
ಉತ್ತರ ಕರ್ನಾಟಕದಲ್ಲಿ ಕುಮಾರಸ್ವಾಮಿ ಅವರದ್ದು ಏನು ನಡೆಯೋಲ್ಲ. ಅವರದ್ದೇನಿದ್ದರೂ ಮೈಸೂರು, ಮಂಡ್ಯ, ಬೆಂಗಳೂರು ರೂರಲ್, ಹಾಸನದಲ್ಲಿ ಮಾತ್ರ. ಹೀಗಾಗಿ ನಮ್ಮ ಭಾಗಕ್ಕೆ ಬಂದಾಗ ಹತಾಷರಾಗಿ ಏನೇನೋ ಮಾತನಾಡುತ್ತಾರೆ ಎಂದು ಕುಟುಕಿದರು.