Advertisement

ಸರ್ಕಾರದಿಂದ ಅಧಿಕಾರ ದುರುಪಯೋಗ: ಆರೋಪ

01:22 AM Apr 01, 2019 | Team Udayavani |

ಬೆಂಗಳೂರು: ಜಿಲ್ಲಾಧಿಕಾರಿಗಳನ್ನು ವರ್ಗಾವಣೆ ಮಾಡುವ ಮೂಲಕ ರಾಜ್ಯ ಸರ್ಕಾರ ಚುನಾವಣಾ ಅಧಿಕಾರವನ್ನು ದುರುಪಯೋಗ ಮಾಡಿಕೊಳ್ಳುತ್ತಿದೆ ಎಂದು ಬಿಜೆಪಿ ಆರೋಪಿಸಿದೆ.

Advertisement

ಪಕ್ಷಪಾತ ಆರೋಪದ ಮೇಲೆ ಹಾಸನ, ವಿಜಯಪುರ ಹಾಗೂ ಬೆಳಗಾವಿ ಜಿಲ್ಲಾಧಿಕಾರಿಗಳನ್ನು ರಾಜ್ಯ ಸರ್ಕಾರ ವರ್ಗಾವಣೆ ಮಾಡಿದೆ. ಇದು ಅಧಿಕಾರ ದುರುಪಯೋಗ ಮಾಡಿಕೊಳ್ಳುತ್ತಿರು ವುದಕ್ಕೆ ಸಾಕ್ಷಿ ಎಂದು ರಾಜ್ಯ ಬಿಜೆಪಿ ಸಹ ವಕ್ತಾರ ಎಸ್‌.ಪ್ರಕಾಶ್‌ ಸುದ್ದಿಗೋಷ್ಠಿಯಲ್ಲಿ ಆರೋಪಿಸಿದರು.

ಮಂಡ್ಯದಲ್ಲಿ ನಿಖಿಲ್‌ ಕುಮಾರಸ್ವಾಮಿ ನಾಮಪತ್ರ ಕಾನೂನು ಬಾಹಿರವಾಗಿದೆ ಎಂದು ಪ್ರಶ್ನಿಸಿದ ಪಕ್ಷೇತರ ಅಭ್ಯರ್ಥಿ ಸುಮಲತಾ
ಅವರಿಗೆ ಜಿಲ್ಲಾಧಿಕಾರಿಗಳ ಮೂಲಕ ನೋಟಿಸ್‌ ನೀಡಿದ್ದಾರೆ. ಈ
ಪ್ರಕರಣದ ನಿಷ್ಪಕ್ಷಪಾತ ತನಿಖೆಗಾಗಿ ಮಂಡ್ಯ ಜಿಲ್ಲಾಧಿಕಾರಿಯನ್ನು
ವರ್ಗಾವಣೆ ಮಾಡಬೇಕೆಂದು ಆಗ್ರಹಿಸಿದರು.

ಭ್ರಷ್ಟಾಚಾರಿಗಳು ಮತ್ತು ಗುತ್ತಿಗೆದಾರರ ಮೇಲೆ ಐಟಿ ಅಧಿಕಾರಿಗಳು ನಡೆಸುತ್ತಿರುವ ದಾಳಿಯನ್ನು ನಿಲ್ಲಿಸಬೇಕು ಎಂದು ಚುನಾವಣಾಧಿಕಾರಿಗಳಿಗೆ ಮುಖ್ಯಮಂತ್ರಿಗಳು ಬರೆದಿರುವ ಪತ್ರ
ಖಂಡನಾರ್ಹ. ಇದು ಚುನಾವಣೆಯಲ್ಲಿ ಹಣದ ಅವ್ಯವಹಾರಕ್ಕೆ
ವ್ಯವಸ್ಥೆ ಮಾಡಿಕೊಡುವಂತೆ ಪರೋಕ್ಷವಾಗಿ ಬೇಡಿದಂತಿದೆ ಎಂದು
ಆರೋಪಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next