Advertisement

CM ಪುತ್ರನಿಗೆ ನಿಂದನೆ: ಬಂಧನ

12:22 AM Jan 28, 2024 | Team Udayavani |

ಗುಂಡ್ಲುಪೇಟೆ: ಗುಂಡ್ಲುಪೇಟೆ ನಗರದ ಡಿ.ದೇವರಾಜ ಅರಸ್‌ ಕ್ರೀಡಾಂಗಣದಲ್ಲಿ ನಡೆಯುತ್ತಿದ್ದ ಭಕ್ತ ಶ್ರೇಷ್ಠ ಕನಕದಾಸ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ಅವರ ಪುತ್ರ, ಮಾಜಿ ಶಾಸಕ ಯತೀಂದ್ರ ಸಿದ್ದರಾಮಯ್ಯ ಭಾಷಣ ಮಾಡುತ್ತಿದ್ದ ವೇಳೆ ಕಿಡಿಗೇಡಿಯೋರ್ವ ಅವಾಚ್ಯ ಶಬ್ದದಿಂದ ನಿಂದಿಸಿ ಪರಾರಿಯಾಗಿದ್ದಾನೆ. ಇದರಿಂದ ಕೆರಳಿದ ಕುರುಬ ಸಮುದಾಯವು ಆಕ್ರೋಶ ವ್ಯಕ್ತಪಡಿಸಿದೆ. ಕೂಡಲೇ ಸಚಿವ ಭೈರತಿ ಸುರೇಶ್‌ ಅವರು ಕಿಡಿಗೇಡಿಯನ್ನು ಬಂಧಿಸಿ, ಸೂಕ್ತ ಕಾನೂನು ಕ್ರಮ ಕೈಗೊಳ್ಳಿ.

Advertisement

ಯಾವುದೇ ಕಾರಣಕ್ಕೂ ಆತನಿಗೆ ಜಾಮೀನು ಕೊಡಬೇಡಿ ಎಂದು ಗುಂಡ್ಲುಪೇಟೆ ಪಿಐ, ಪಿಎಸ್‌ಐಗೆ ಸೂಚಿಸಿದರು. ಅರ್ಧ ತಾಸಿನ ಬಳಿಕ ರಂಜಿತ್‌ ಎಂಬ ಕಿಡಿಗೇಡಿ ಮತ್ತೆ ಅದೇ ಸ್ಥಳಕ್ಕೆ ಬಂದಾಗ ಪೊಲೀಸರು ಬಂಧಿಸಿದರು. ಕಾರ್ಯಕ್ರಮದಲ್ಲಿದ್ದ ಜನರು ಆತನ ಮೇಲೆ ಹಲ್ಲೆಗೆ ಮುಂದಾಗಿದ್ದು, ಪೊಲೀಸರು ಆರೋಪಿಯನ್ನು ಸುರಕ್ಷಿತವಾಗಿ ಠಾಣೆಗೆ ಕರೆದೊಯ್ದು ಪರಿಸ್ಥಿತಿಯನ್ನು ನಿಯಂತ್ರಿಸಿದರು.

 

Advertisement

Udayavani is now on Telegram. Click here to join our channel and stay updated with the latest news.

Next