Advertisement

ಆರ್ ಎಸ್ಎಸ್ ಧರ್ಮ ಜಾಗರಣದ ಜಿಲ್ಲಾ ಸಹಸಂಯೋಜಕರ ಕಾರ್ ಮೇಲೆ ‘ಕಿಲ್ ಯು ಜಿಹಾದಿ’ಬರಹ

03:35 PM Sep 26, 2022 | Team Udayavani |

ಚಿಕ್ಕಮಗಳೂರು: ಆರ್ ಎಸ್ಎಸ್ ಧರ್ಮ ಜಾಗರಣದ ಜಿಲ್ಲಾ ಸಹಸಂಯೋಜಕರ ಕಾರ್ ಮೇಲೆ ಕಿಲ್ ಯು ಜಿಹಾದಿ ಬರಹ ಬರೆದ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ.

Advertisement

ಆರ್ ಎಸ್ಎಸ್ ಧರ್ಮಜಾಗರಣ ಸಹಸಂಯೋಜಕ ಡಾ.ಶಶಿಧರ್ ಚಿಂದಿಗೆರೆ ಜಯಣ್ಣ ಅವರ ಕಡೂರು ಮನೆಯ ಮುಂದೆ ನಿಲ್ಲಿಸಿದ್ದ ಕಾರ್ ಮೇಲೆ ಈ ರೀತಿಯ ಬರಹ ಬರೆಯಲಾಗಿದೆ. ನಿನ್ನೆ ರಾತ್ರಿ ಕಿಡಿಗೇಡಿಗಳ ಈ ಕೃತ್ಯ ನಡೆಸಿದ್ದು, ಕಾರಿನ ನಾಲ್ಕು ಚಕ್ರದ ಗಾಳಿ ತೆಗೆದು ಬರಹ ಬರೆದಿದ್ದಾರೆ. ಕಾರಿನ ಮೇಲೆ ಕಿಲ್ ಯು, ಜಿಹಾದ್, ಅಶ್ಲೀಲ ಪದಗಳನ್ನು ಬರೆಯಲಾಗಿದೆ.

ಇದನ್ನೂ ಓದಿ:ಸಾಮಾಜಿಕ ನ್ಯಾಯದಡಿ ತೇರದಾಳ ಮತ ಕ್ಷೇತ್ರದ ಬಿಜೆಪಿ ಟಿಕೇಟ್ ಆಕಾಂಕ್ಷಿ: ಮನೋಹರ ಶಿರೋಳ     

ಡಾ.ಶಶಿಧರ್ ಚಿಂದಿಗೆರೆ ಜಯಣ್ಣ ಅವರು ಕಡೂರು ಪೊಲೀಸರಿಗೆ ದೂರು ನೀಡಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ಪರಿಶೀಲನೆ ನಡೆಸಿದರು.

Advertisement

Udayavani is now on Telegram. Click here to join our channel and stay updated with the latest news.

Next