Advertisement

ಎಬಿವಿಪಿ ಕಾರ್ಯಕರ್ತ ಹತ್ಯೆ: ಎಸ್‌ಡಿಪಿಐ ಸದಸ್ಯರ ಸೆರೆ

11:19 AM Jan 21, 2018 | |

ಕಣ್ಣೂರು: ಶುಕ್ರವಾರ ನಡೆದ ಎಬಿವಿಪಿ ಸದಸ್ಯ ಶ್ಯಾಮ್‌ ಪ್ರಸಾದ್‌ ಹತ್ಯೆ ಪ್ರಕರಣ ಸಂಬಂಧ ಕೇರಳ ಪೊಲೀಸರು ಸೋಶಿಯಲ್‌ ಡೆಮಾಕ್ರಾಟಿಕ್‌ ಪಾರ್ಟಿ ಆಫ್ ಇಂಡಿಯಾ(ಎಸ್‌ಡಿಪಿಐ)ದ ನಾಲ್ವರು ಕಾರ್ಯಕರ್ತರನ್ನು ಶನಿವಾರ ಬಂಧಿಸಿದ್ದಾರೆ. ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಎಸ್‌ಡಿಪಿಐ ನಿಷೇಧಿಸುವಂತೆ ಕೇರಳ ಬಿಜೆಪಿ ರಾಜ್ಯ ಸರಕಾರವನ್ನು ಆಗ್ರಹಿಸಿದೆ. ಪಾಪ್ಯುಲರ್‌ ಫ್ರಂಟ್‌ ಆಫ್ ಇಂಡಿಯಾ(ಪಿಎಫ್ಐ)ದ ಭಾಗವಾಗಿರುವ ಎಸ್‌ಡಿಪಿಐ ಅನ್ನು ನಿಷೇಧಿಸಬೇಕು. ಇಂಡಿಯನ್‌ ಯೂನಿಯನ್‌ ಮುಸ್ಲಿಂ ಲೀಗ್‌ನಂಥ ಪಕ್ಷಗಳೂ ಇದೇ ಬೇಡಿಕೆ ಹೊಂದಿವೆ ಎಂದು ರಾಜ್ಯ ಬಿಜೆಪಿ ಘಟಕ ಅಧ್ಯಕ್ಷ ಕುಮ್ಮನಮ್‌ ರಾಜಶೇಖರನ್‌ ಹೇಳಿದರು. ಈ ಕುರಿತು ರಾಜ್ಯ ಸರಕಾರ ಕ್ರಮ ಕೈಗೊಳ್ಳದಿದ್ದರೆ ನಾವು ಕೇಂದ್ರ ಸರಕಾರದ ಮೊರೆ ಹೋಗುತ್ತೇವೆ ಎಂದೂ ಅವರು ಹೇಳಿದರು. 
 

Advertisement
Advertisement

Udayavani is now on Telegram. Click here to join our channel and stay updated with the latest news.

Next