Advertisement

ಉಚಿತ ಪ್ರಯಾಣಕ್ಕೆ ಆಗ್ರಹಿಸಿ ಎಬಿವಿಪಿ ಮನವಿ

10:10 AM Jun 12, 2019 | Suhan S |

ಬೈಲಹೊಂಗಲ: ಪ್ರಥಮ ವರ್ಷದ ಕಾಲೇಜಿಗೆ ಪ್ರವೇಶ ಪಡೆದ ವಿದ್ಯಾರ್ಥಿಗಳಿಗೆ ಬಸ್‌ಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅನುಮತಿ ನೀಡುವಂತೆ ಆಗ್ರಹಿಸಿ ವಿದ್ಯಾರ್ಥಿಗಳು, ಎಬಿವಿಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿ, ಮಂಗಳವಾರ ಪಟ್ಟಣದ ಕೆಎಸ್‌ಆರ್‌ಟಿಸಿ ಘಟಕ ವ್ಯವಸ್ಥಾಪಕರಿಗೆ ಮನವಿ ಸಲ್ಲಿಸಿದರು.

Advertisement

ಹೊಸದಾಗಿ ಪ್ರವೇಶ ಪಡೆದ ಪ್ರಥಮ ವರ್ಷದ ಕಾಲೇಜು ವಿದ್ಯಾರ್ಥಿಗಳಿಗೆ ಬಸ್‌ಗಳಲ್ಲಿ ಪ್ರಯಾಣಿಸಲು ನಿರ್ವಾಹಕರು ತಕರಾರು ಮಾಡುತ್ತಿದ್ದು, ವಿದ್ಯಾರ್ಥಿಗಳಿಗೆ ಬಸ್‌ ಪಾಸ್‌ ಹೊಸದಾಗಿ ನೀಡಿಲ್ಲದಿರುವದರಿಂದ ಜೂ.30 ರವರೆಗೆ ಉಚಿತವಾಗಿ ಪ್ರಯಾಣಿಸಲು ಸರಕಾರ ಅಧಿಸೂಚನೆ ನೀಡಿದೆ. ಶುಲ್ಕ ಪಾವತಿ, ರಶೀದಿ, ಗುರುತಿನ ಚೀಟಿ ನಿರ್ವಾಹಕರಿಗೆ ತೋರಿಸಿ ಪ್ರಯಾಣ ಮಾಡಬಹುದೆಂದು ಸುತ್ತೋಲೆ ಇದ್ದರೂ ನಿರ್ವಾಹಕರು ಹಣ ಕೊಟ್ಟು ಟಿಕೆಟ್ ಪಡೆಯಲು ತಿಳಿಸುತ್ತಿರುವುದು ಸರಿಯಲ್ಲ. ನಿರ್ವಾಹಕರಿಗೆ ತಾವು ಹಣ ಪಡೆಯದೆ ಪ್ರಯಾಣಿಸಲು ಸೂಚನೆ ನೀಡಬೇಕೆಂದು ಮನವಿಯಲ್ಲಿ ತಿಳಿಸಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next