Advertisement

ಲಂಚ ಪಡೆಯುತ್ತಿದ್ದ ಅಧಿಕಾರಿ ACB ಬಲೆಗೆ

07:54 PM Sep 08, 2020 | Hari Prasad |

ಮುಂಡರಗಿ (ಗದಗ): ರೈತರಿಗೆ ಸಹಾಯಧನ ಬಿಡುಗಡೆ ಲಂಚ ಪಡೆಯುತ್ತಿದ್ದ ತೋಟಗಾರಿಕೆ ಇಲಾಖೆಯ ಅಧಿಕಾರಿಯೊಬ್ಬರು ಮಂಗಳವಾರ ಎಸಿಬಿ ಬಲೆಗೆ ಸಿಕ್ಕಿಬಿದ್ದಿದ್ದಾರೆ.

Advertisement

ಮುಂಡರಗಿ ತಾಲೂಕು ತೋಟಗಾರಿಕೆ ಸಹಾಯಕ ಅಧಿಕಾರಿ ಸುರೇಶ್ ಹನುಮಂತಪ್ಪ ಬಾರಕೇರ್ ಎಂಬುವವರು ತಮ್ಮ ಕಚೇರಿಯಲ್ಲಿ ರೈತರೊಬ್ಬರಿಂದ 15 ಸಾವಿರ ರೂ. ಲಂಚ ಪಡೆಯುತ್ತಿದ್ದಾಗ ದಾಳಿ ನಡೆಸಿದ ಎಸಿಬಿ ಅಧಿಕಾರಿಗಳು, ಆರೋಪಿಯನ್ನು ಬಂಧಿಸಿದ್ದಾರೆ.

ತಾಲೂಕಿನ ರೈತರೊಬ್ಬರು ತಮ್ಮ ಎರಡು ಹೆಕ್ಟರ್ ಜಮೀನಿನಲ್ಲಿ ಪೊಪ್ಪಾಯಿ ಬೆಳೆ ಬೆಳೆದಿದ್ದರು. ಅದಕ್ಕೆ ಸರಕಾರದಿಂದ ಪ್ರತಿ ಹೆಕ್ಟರ್‌ಗೆ 1.75 ಲಕ್ಷ ರೂ. ಗಳಂತೆ ಎರಡು ಹೆಕ್ಟರ್‌ಗೆ 3.50 ಲಕ್ಷ ರೂ. ಸಹಾಯಧನ ಮಂಜೂರಾಗಿತ್ತು.

ಈ ಹಣವನ್ನು ನೀಡಲು 14 ಸಾವಿರ ರೂ. ಲಂಚಕ್ಕಾಗಿ ಬೇಡಿಕೆ ಇಟ್ಟಿದ್ದಾರೆ ಎಂದು ಎಸಿಬಿ ಅಧಿಕಾರಿಗಳಿಗೆ ದೂರು ನೀಡಲಾಗಿತ್ತು.

ಈ ಹಿನ್ನೆಲೆಯಲ್ಲಿ ದಾಳಿ ನಡೆಸಿದ ಎಸಿಬಿ ಅಧಿಕಾರಿಗಳು ಆರೋಪಿಯನ್ನು ರೆಡ್ ಹ್ಯಾಂಡ್‌ ಆಗಿ ಬಂಧಿಸಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next