Advertisement

ಬೆಳ್ಳಂ‌ ಬೆಳಗ್ಗೆ ACB ಶಾಕ್ : ಕೃಷಿ ಇಲಾಖೆ ಟಿ.ಎಸ್.ರುದ್ರೇಶಪ್ಪ ಮನೆ ಮೇಲೆ ದಾಳಿ

08:57 AM Nov 24, 2021 | Team Udayavani |

ದಾವಣಗೆರೆ : ಬೆಳ್ಳಂ‌ ಬೆಳಗ್ಗೆ ಭ್ರಷ್ಟ ಅಧಿಕಾರಿಗಳಿಗೆ ಎಸಿಬಿ ದಾಳಿ ಮಾಡುವ ಮೂಲಕ ಶಾಕ್ ಕೊಟ್ಟಿದೆ. ರಾಜ್ಯಾದ್ಯಂತ 15 ಸರ್ಕಾರಿ ಅಧಿಕಾರಿಗಳ ಮೇಲೆ ಎಸಿಬಿ ದಾಳಿ ನಡೆಸಿದೆ.

Advertisement

ಗದಗ ಜಿಲ್ಲೆಯ ಕೃಷಿ ಇಲಾಖೆ ಜಂಟಿ ನಿರ್ದೇಶಕ ಟಿ.ಎಸ್.ರುದ್ರೇಶಪ್ಪ ಮನೆ ಹಾಗೂ ಕಚೇರಿ ಸೇರಿ ಏಕ ಕಾಲಕ್ಕೆ ಐದು ಕಡೆ ಎಸಿಬಿ ದಾಳಿ ನಡೆದಿದೆ.

ರುದ್ರೇಶಪ್ಪ ಮೂಲತಃ ದಾವಣಗೆರೆ ಜಿಲ್ಲೆಯ  ಚನ್ನಗಿರಿ ತಾಲೂಕಿನ  ತಣಿಗೆರೆಯವರು.  ದಾವಣಗೆರೆ ಎಸಿಬಿ ಎಸ್ಪಿ ಜಯಪ್ರಕಾಶ ನೇತೃತ್ವದಲ್ಲಿ ತಣಿಗೆರೆ ಗ್ರಾಮದಲ್ಲಿರುವ ಮನೆ ಮೇಲೆ ದಾಳಿ ನಡೆಸಿರುವ ಅಧಿಕಾರಿಗಳು ದಾಖಲೆ ಪರಿಶೀಲನೆ ನಡೆಸುತ್ತಿದ್ದಾರೆ

Advertisement

Udayavani is now on Telegram. Click here to join our channel and stay updated with the latest news.

Next